ಮೆಟ್ರೋ ರೈಲು ಸಾಂದರ್ಭಿಕ ಚಿತ್ರ 
ರಾಜ್ಯ

‘ಬಯೋಕಾನ್ ಹೆಬ್ಬಗೋಡಿ’ ಮೆಟ್ರೋ ನಿಲ್ದಾಣದ ಹೆಸರು ಬದಲಾವಣೆ ಇಲ್ಲ: ಬಿಎಂಆರ್‌ಸಿಎಲ್

ಹೆಬ್ಬಗೋಡಿ ನಮ್ಮ ಮೆಟ್ರೋ ಸ್ಟೇಷನ್‌ಗೆ 'ಬಯೋಕಾನ್‌ ಹೆಬ್ಬಗೋಡಿ ಮೆಟ್ರೋ ನಿಲ್ದಾಣ' ಎಂಬ ನಾಮಫಲಕ ಹಾಕುತ್ತಿದ್ದಂತೆ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘ಬಯೋಕಾನ್ ಹೆಬ್ಬಗೋಡಿ’ ಮೆಟ್ರೊ ನಿಲ್ದಾಣವನ್ನು ಹೆಬ್ಬಗೋಡಿ ನಿಲ್ದಾಣ...

ಬೆಂಗಳೂರು: ಹೆಬ್ಬಗೋಡಿ ನಮ್ಮ ಮೆಟ್ರೋ ಸ್ಟೇಷನ್‌ಗೆ 'ಬಯೋಕಾನ್‌ ಹೆಬ್ಬಗೋಡಿ ಮೆಟ್ರೋ ನಿಲ್ದಾಣ' ಎಂಬ ನಾಮಫಲಕ ಹಾಕುತ್ತಿದ್ದಂತೆ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘ಬಯೋಕಾನ್ ಹೆಬ್ಬಗೋಡಿ’ ಮೆಟ್ರೊ ನಿಲ್ದಾಣವನ್ನು ಹೆಬ್ಬಗೋಡಿ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕು ಎಂದು ಹೆಬ್ಬಗೋಡಿನ ನಿವಾಸಿಗಳು ಒತ್ತಾಯಿಸಿದ್ದಾರೆ. ಆದರೆ ‘ಬಯೋಕಾನ್ ಹೆಬ್ಬಗೋಡಿ’ಮೆಟ್ರೋ ನಿಲ್ದಾಣದ ಹೆಸರು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(ಬಿಎಂಆರ್‌ಸಿಎಲ್) ಬುಧವಾರ ಸ್ಪಷ್ಟಪಡಿಸಿದೆ.

ಬಿಎಂಆರ್‌ಸಿಎಲ್‌ ಸ್ಥಳೀಯರ ಒಪ್ಪಿಗೆ ಪಡೆಯದೆ ಏಕಪಕ್ಷೀಯವಾಗಿ ನಿಲ್ದಾಣಕ್ಕೆ ಬಯೋಕಾನ್ ಹೆಸರಿಡುವ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆಬ್ಬಗೋಡಿ ನಗರಸಭೆ ಸದಸ್ಯರು ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು. ನಿಲ್ದಾಣದ ಹೆಸರಿನಿಂದ ಬಯೋಕಾನ್ ತೆಗೆದುಹಾಕುವವರೆಗೂ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ ನಿಲ್ದಾಣದ ಹೆಸರು ಬದಲಾಯಿಸುವ ಬಗ್ಗೆ ಪ್ರತಿಕ್ರಿಯಿಸಿದ BMRCL ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, ಪ್ರದೇಶದ ಹೆಸರಿನ ಜೊತೆಗೆ ಬಯೋಕಾನ್ ಹೆಸರು ಸೇರಿಸಲಾಗಿದೆ. ಇದು BMRCL ನ ‘ಹೆಸರಿಸುವ ಹಕ್ಕು’ ನೀತಿಯ ಅಡಿಯಲ್ಲಿ ಬರುತ್ತದೆ, ಇದನ್ನು ಸರ್ಕಾರವು ಒಪ್ಪಿದೆ ಎಂದು ಹೇಳಿದ್ದಾರೆ.

ಯಾವುದೇ ಸಂಸ್ಥೆಯು ಮೆಟ್ರೋದ ಯಾವುದೇ ನಿಲ್ದಾಣಕ್ಕೆ 65 ಕೋಟಿ ರೂಪಾಯಿ ಪಾವತಿಸುತ್ತದೆಯೋ ಆ ನಿಲ್ದಾಣಕ್ಕೆ 30 ವರ್ಷಗಳವರೆಗೆ ಆ ಸಂಸ್ಥೆಯ ಹೆಸರು ಇಡುವ ಹಕ್ಕನ್ನು ಪಡೆಯುತ್ತದೆ. ಇದು ಮೆಟ್ರೊ ಕಾಮಗಾರಿಗೆ ಖಾಸಗಿ ನಿಧಿಯನ್ನು ಕ್ರೋಢೀಕರಿಸುವ ಮತ್ತು ಸರ್ಕಾರದ ಮೇಲಿನ ಹೊರೆ ತಗ್ಗಿಸುವ ಕ್ರಮವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT