ಸಂಗ್ರಹ ಚಿತ್ರ 
ರಾಜ್ಯ

ಎಚ್‌ಎಲ್‌ಸಿ ಹುದ್ದೆ ನೇಮಕ ವಿಚಾರ: ಕೆಪಿಎಸ್‌ಸಿ ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ!

ಕೆಪಿಎಸ್‌ಸಿ ಕಾನೂನು ಕೋಶದ ಮುಖ್ಯಸ್ಥ (ಎಚ್‌ಎಲ್‌ಸಿ) ಹುದ್ದೆಗೆ ನೇಮಕಾತಿಗೆ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆ ಹಿಂಪಡೆದು, ಕಾರ್ಯದರ್ಶಿ ಹೊಸತಾಗಿ ಅಧಿಸೂಚನೆ ಹೊರಡಿಸಿರುವ ಮೂಲಕ ಕಾರ್ಯದರ್ಶಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆಂದು ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್ ಅವರು ಗುರುವಾರ ಆರೋಪಿಸಿದ್ದಾರೆ.

ಬೆಂಗಳೂರು: ಕೆಪಿಎಸ್‌ಸಿ ಕಾನೂನು ಕೋಶದ ಮುಖ್ಯಸ್ಥ (ಎಚ್‌ಎಲ್‌ಸಿ) ಹುದ್ದೆಗೆ ನೇಮಕಾತಿಗೆ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆ ಹಿಂಪಡೆದು, ಕಾರ್ಯದರ್ಶಿ ಹೊಸತಾಗಿ ಅಧಿಸೂಚನೆ ಹೊರಡಿಸಿರುವ ಮೂಲಕ ಕಾರ್ಯದರ್ಶಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆಂದು ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್ ಅವರು ಗುರುವಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಾಹುಕಾರ್ ಅವರು, ಕಾರ್ಯದರ್ಶಿಯವರು ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿ ಈ ಬಗ್ಗೆ ಗಮನಹರಿಸಿ, ಕಾರ್ಯದರ್ಶಿಗೆ ತಿಳಿವಳಿಕೆ ನೀಡಬೇಕು’ ಎಂದು ಹೇಳಿದ್ದಾರೆ.

‘ಎಚ್‌ಎಲ್‌ಸಿ ಹುದ್ದೆಗೆ ನೇಮಿಸಲು ಆಯೋಗವೇ ಮಾನದಂಡ ರೂಪಿಸಿಕೊಂಡಿದೆ. ‌ಅದರಂತೆ, ಅಧಿಸೂಚನೆ ಹೊರಡಿಸಿ ಸದಸ್ಯರ ಆಯ್ಕೆ ಸಮಿತಿ ರಚಿಸಿ ಅರ್ಹರನ್ನು ಸಂದರ್ಶನ ಮಾಡಿ ಆಯ್ಕೆ ಮಾಡಲಾಗುತ್ತದೆ. ಎಚ್‌ಎಲ್‌ಸಿ ಆಗಿದ್ದ ಎಸ್‌.ಎಚ್‌. ಹೊಸಗೌಡರ್‌ ಅವರು ಎರಡು ವರ್ಷ ಸೇವೆ ಪೂರ್ಣಗೊಳಿಸಿದ್ದರಿಂದ ಅವರ ಬದಲು ಹೊಸಬರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲು ಕಾರ್ಯದರ್ಶಿಗೆ ಸೂಚಿಸಲಾಗಿತ್ತು.

ಆಯ್ಕೆ ಸಮಿತಿ ಆಯ್ಕೆ ಮಾಡಿದವರನ್ನು ನೇಮಿಸುವಂತೆ ಶಿಫಾರಸು ಮಾಡಿದರೂ, ಆಧಾರರಹಿತ ಕಾರಣ ನೀಡಿ ನೇಮಕಾತಿ ಆದೇಶ ಹೊರಡಿಸಲು ಕಾರ್ಯದರ್ಶಿ ನಿರಾಕರಿಸಿದ್ದಾರೆ. ಎಚ್‌ಎಲ್‌ಸಿ ಹುದ್ದೆಯ ಆಯ್ಕೆಯಲ್ಲಿ ಕಾರ್ಯದರ್ಶಿಯವರಿಗೆ ಯಾವುದೇ ಪಾತ್ರ ಇಲ್ಲ’ ಎಂದು ಹೇಳಿದ್ದಾರೆ.

ಎಚ್‌ಎಲ್‌ಸಿ ಹುದ್ದೆಗೆ ಆಯ್ಕೆ ಮಾಡಿದವರಿಗೆ ನೇಮಕಾತಿ ಆದೇಶ ಹೊರಡಿಸುವಂತೆ ಶಿಫಾರಸು ಮಾಡಿದ ಕಡತದಲ್ಲಿ, ಈ ನೇಮಕಾತಿ ಪಾರದರ್ಶಕವಾಗಿ ನಡೆದಿದೆ ಎಂದು ಸಾಬೀತುಪಡಿಸುವ ಯಾವುದೇ ದಾಖಲೆಗಳನ್ನು ಆಯೋಗವು ನೀಡಿಲ್ಲ.

ಆಯ್ಕೆ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳನ್ನು ಆಯೋಗದ ಗಮನಕ್ಕೆ ತರಲು ಕಾರ್ಯದರ್ಶಿ ಪ್ರಯತ್ನಿಸಿದರೂ ಅದನ್ನು ಸರಿಪಡಿಸಿಕೊಳ್ಳಲು ಕೂಡಾ ಮುಂದಾಗಿಲ್ಲ’ ಎಂಬ ಕಾರಣ ನೀಡಿದ್ದ ಕಾರ್ಯದರ್ಶಿ ಕೆ.ಎಸ್‌. ಲತಾಕುಮಾರಿ ನೇಮಕಾತಿಗೆ ಮರು ಅಧಿಸೂಚನೆ ಹೊರಡಿಸಿದ್ದಾರೆ. ಈ ಸಂಬಂ ಡಿಪಿಎಆರ್ ಮತ್ತು ಮುಖ್ಯ ಕಾರ್ಯದರ್ಶಿ ಮಧ್ಯಪ್ರವೇಶಿಸಬೇಕೆಂದೂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT