ರಾಜ್ಯ

ದೆಹಲಿ ಪ್ರವಾಸ ಬಳಿಕ ವಿದೇಶಕ್ಕೆ ಹಾರಿದ ಸಚಿವ ಸತೀಶ್ ಜಾರಕಿಹೊಳಿ

Manjula VN

ಬೆಳಗಾವಿ: ಕಳೆದ 4 ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

‘ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಂಬಂಧವಾಗಿ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಸಾಕಷ್ಟು ಚರ್ಚೆ ನಡೆದಿದ್ದವು. ಈ ಸಂಬಂಧ ಹೈಕಮಾಂಡ್ ಹಲವು ಸೂಚನೆಗಳನ್ನು ನೀಡಿದ್ದು, ಇದರಿಂದ ಬೇಸರಗೊಂಡು ವಿದೇಶಕ್ಕೆ ಹೋಗಿರಬಹುದು ಹೇಳಲಾಗುತ್ತಿದೆ.

ನಿನ್ನೆಯಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದ್ದು, ಸಭೆಗೆ ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣದ ಪಾರ್ಲಿಮೆಂಟ್ ಸಮನ್ವಯಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆದಿತ್ತು. ರಾಜ್ಯದಿಂದ ಸಚಿವರು ಹಾಗೂ ಕೆಲವು ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಈ ನಿಟ್ಟಿನಲ್ಲಿ ನಿಮ್ಮಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಗಂಭೀರವಾಗಿ ಎದುರಿಸಿ. ಒಂದು ವೇಳೆ ಚುನಾವಣೆಯಲ್ಲಿ ಸೋತಿದ್ದೇ ಆದರೆ, ಸಂಬಂಧಪಟ್ಟ ಸಚಿವರ ತಲೆದಂಡ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

SCROLL FOR NEXT