ಸಂಗ್ರಹ ಚಿತ್ರ 
ರಾಜ್ಯ

ಜ.17 ಇಂಡಿಯಾ-ಅಫ್ಘಾನಿಸ್ತಾನ ಟಿ20 ಕ್ರಿಕೆಟ್​​: ಬಿಎಂಟಿಸಿಯಿಂದ ಹೆಚ್ಚುವರಿ ಬಸ್​​ ವ್ಯವಸ್ಥೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17 ರಂದು ಭಾರತ ಹಾಗೂ ಅಫ್ಘಾನಿಸ್ತಾನ ಟಿ20 ಹೊನಲು ಬೆಳಕಿನ ಪಂದ್ಯ ನಡೆಯಲಿದ್ದು. ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್​ ಸೇವೆಯನ್ನು ಒದಗಿಸಲಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನವರಿ 17 ರಂದು ಭಾರತ ಹಾಗೂ ಅಫ್ಘಾನಿಸ್ತಾನ ಟಿ20 ಹೊನಲು ಬೆಳಕಿನ ಪಂದ್ಯ ನಡೆಯಲಿದ್ದು. ಈ ಪಂದ್ಯ ವೀಕ್ಷಣೆಗೆ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್​ ಸೇವೆಯನ್ನು ಒದಗಿಸಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ 12 ಕಡೆಗಳಿಗೆ ಹೆಚ್ಚುವರಿ ಬಸ್​​​ ಕಾರ್ಯಾಚರಣೆ ನಡೆಸಲಿವೆ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್​,​ ಕೆಂಗೇರಿ, ನೆಲಮಂಗಲ, ಯಲಹಂಕ 5ನೇ ಹಂತ 5ನೇ ಹಂತ, ಬಾಗಲೂರು, ಹೊಸಕೋಟೆಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಲಾಗಿದೆ.

ಮಾರ್ಗಸಂಖ್ಯೆ ಎಸ್‍ಬಿಎಸ್ -1ಕೆ ಬಸ್ ಎಚ್‍ಎಎಲ್ ಮಾರ್ಗವಾಗಿ ಕಾಡುಕೋಡಿ ತಲುಪಲಿದೆ. ಎಸ್‍ಬಿಎಸ್-13ಕೆ ನಂಬರಿನ ಬಸ್ ಹೂಡಿ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣ ತಲುಪಲಿದೆ. ಜಿ-2 ಬಸ್ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರ, ಜಿ-3ಬಸ್ ಹೊಸೂರು ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ, ಜಿ-4 ಜಯದೇವ ಆಸ್ಪತ್ರೆ ಮಾರ್ಗವಾಗಿ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ತಲುಪಲಿದೆ ಎಂದು ಬಿಎಂಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT