ಸುಚನಾ ಸೇಠ್ 
ರಾಜ್ಯ

ನನ್ನ ಮಗನನ್ನು ಬಹಳ ಪ್ರೀತಿಸುತ್ತೇನೆ, ಮಗು ಸಾವಿಗೆ ಪತಿಯೇ ಕಾರಣ: ಟಿಶ್ಯೂ ಪೇಪರ್ ನಲ್ಲಿ ಸುಚನಾ ಆಕ್ರೋಶದ ಪದಗಳು!

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಬಾಲಕನನ್ನು ಉಸಿರುಗಟ್ಟಿಸಿ ಹತ್ಯೆಗೈದ ಪ್ರಕರಣದಲ್ಲಿ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ.

ಪಣಜಿ/ಬೆಳಗಾವಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ತನ್ನ ನಾಲ್ಕು ವರ್ಷದ ಬಾಲಕನನ್ನು ಉಸಿರುಗಟ್ಟಿಸಿ ಹತ್ಯೆಗೈದ ಪ್ರಕರಣದಲ್ಲಿ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಗೋವಾ ಪೊಲೀಸರು, ಆರೋಪಿ ಸುಚನಾ ಸೇಠ್ ಬ್ಯಾಗ್ ನಲ್ಲಿ ಐಲೈನರ್ ನಿಂದ ಬರೆಯಲ್ಪಟ್ಟಿದ್ದ ಕೆಲವು ಸಾಲುಗಳಿರುವ ಟಿಶ್ಯೂ ಪೇಪರ್'ನ್ನು ಪತ್ತೆ ಮಾಡಿದ್ದಾರೆ.

ಟಿಶ್ಯೂ ಪೇಪರ್ ನಲ್ಲಿ ಸುಚನಾ ಪತಿ ವಿರುದ್ಧ ಹರಿಹಾಯ್ದಿರುವ ಪದಗಳನ್ನು ಬರೆದಿರುವುದು ಕಂಡು ಬಂದಿದೆ. ನನಗೆ ಅಪರಾಧಿ ಭಾವನೆ ಶುರುವಾಗಿದೆ. ಹತಾಶಳಾಗಿದ್ದೇನೆ. ನಾನು ನನ್ನ ಮಗನನ್ನು ತುಂಬಾ ಪ್ರೀತಿಸುತ್ತೇನೆ. ಆದರೆ, ಅವನು ತನ್ನ ತಂದೆಯನ್ನು ಭೇಟಿಯಾಗುವುದು ನನಗಿಷ್ಟವಿಲ್ಲ. ಅಲ್ಲದೆ, ಮಗನ ಸಾವಿಗೆ ನಾನು ಕಾರಣಳಲ್ಲ. ಪತಿ ಕಾರಣ ಎಂದು ಬರೆದಿರುವುದು ಕಂಡು ಬಂದಿದೆ.

ಈ ಟಿಶ್ಯೂ ಪೇಪರ್ ನ್ನು ಪೊಲೀರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸೂಚನೆ ನೀಡಬಹುದು. ಕೊಲೆ ಮಾಡಲು ಸುಚನಾ ಉದ್ದೇಶ ಏನಿರಬಹುದು ಎಂಬುದು ತಿಳಿದುಬರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಪತಿ ಮಾಡಿದ್ದ ವಿಡಿಯೋ ಕರೆ ಸ್ವೀಕರಿಸಿದ್ದ ಸುಚನಾ, ಜನವರಿ 7 ರಂದು ಮಗು ಭೇಟಿ ಮಾಡಲು ಬರುವುದಾಗಿ ತಿಳಿಸಿದ್ದಾಗ ಒಪ್ಪಿಗೆ ಸೂಚಿಸಿದ್ದಳು. ಆದರೆ, ಇದನ್ನು ತಪ್ಪಿಸಲು ಅಪರಾಧ ಎಸಗಲು ಗೋವಾಗೆ ತೆರಳಿದ್ದಳು ಎಂದು ತಿಳಿದುಬಂದಿದೆ.

ಆರೋಪಿಯನ್ನು ಅಪರಾಧ ನಡೆದ ಸ್ಥಳಕ್ಕೆ ಕರೆದೊಯ್ದ ಪೊಲೀಸರು
ಈ ನಡುವೆ ಶುಕ್ರವಾರ ಮಧ್ಯಾಹ್ನ, ಪೊಲೀಸರು ಸುಚನಾ ಅವರನ್ನು ಅಪರಾಧ ಎಸಗಿದ ಸ್ಥಳಕ್ಕೆ ಕರೆದೊಯ್ದಿದ್ದು, ಘಟನೆಯನ್ನು ಮರುಸೃಷ್ಟಿಸಿದ್ದಾರೆಂದು ತಿಳಿದುಬಂದಿದೆ.

ಈ ವೇಳೆ ಆರೋಪಿ ಸುಚನಾ ಆರಂಭಿಕ ಹಂತದಲ್ಲಿ ಪೊಲೀಸರಿಗೆ ಸಹಕರಿಸಲು ನಿರಾಕರಿಸಿದ್ದಾಳೆ. ಆದರೆ, ನಂತರ ಒಪ್ಪಿಕೊಂಡಲು ಎಂದು ವರದಿಗಳು ತಿಳಿಸಿವೆ. ಇದಲ್ಲದೆ, ಸುಚನಾ ಕಾರು ಚಾಲನಿಗೆ ನೀಡಬೇಕಿದ್ದ ರೂ.30 ಸಾವಿರ ಬಾಡಿಗೆ ಹಣವನ್ನು ನೀಡಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆಯ ಭಾಗವಾಗಿ ಆ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT