ಸಂಗ್ರಹ ಚಿತ್ರ 
ರಾಜ್ಯ

3,900 ಕೋಟಿ ರೂ. ಹೂಡಿಕೆಯ 73 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ರೂ.3,935 ಕೋಟಿಗೂ ಹೆಚ್ಚು ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಶುಕ್ರವಾರ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ರೂ.3,935 ಕೋಟಿಗೂ ಹೆಚ್ಚು ಹೂಡಿಕೆಯಾಗಲಿರುವ ಒಟ್ಟು 73 ಯೋಜನಾ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಶುಕ್ರವಾರ ಗ್ರೀನ್ ಸಿಗ್ನಲ್ ನೀಡಿದೆ.

ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು, ಇದರಿಂದ 14,497 ಉದ್ಯೋಗಾವಕಾಶ ಸೃಷ್ಟಿಯಾಗಲಿವೆ ಎಂದು ಹೇಳಿದರು.

ಅನುಮೋದನೆ ನೀಡಿರುವ ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ ಎಂದು ತಿಳಿಸಿದರು.

ಈ ಕಂಪನಿಗಳು ದೇವನಹಳ್ಳಿ, ಸಿರಾ ಕೈಗಾರಿಕಾ ಪ್ರದೇಶ, ಹೂವಿನಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿದ್ದು, ಒಟ್ಟು 9,200 ಉದ್ಯೋಗಗಳನ್ನು ಸೃಷ್ಟಿಸಲಿವೆ. ಮೇಲ್ಕಂಡ ಉದ್ದಿಮೆಗಳು ಕನಿಷ್ಠ 96 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ ಎಂದು ಮಾಹಿತಿ ನೀಡಿದರು.

ಅಲ್ಲದೆ, ಕನಿಷ್ಠ 15 ಕೋಟಿ ರೂಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ. ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ, ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ ಎಂದರು.

ರಾಜ್ಯ ಸರ್ಕಾರವು ಉದ್ಯಮಸ್ನೇಹಿಯಾಗಿದ್ದು, ಹೂಡಿಕೆದಾರರಿಗೆ ಸುಗಮ ಒಪ್ಪಿಗೆ ಸಿಗುವಂತೆ ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದಿದೆ. ಹೂಡಿಕೆದಾರರನ್ನು ಉತ್ತೇಜಿಸವಂತಹ ಹಲವು ಅಂಶಗಳನ್ನು 2020-25ರ ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದ್ದು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ಕೊಡಲಾಗಿದೆ. ಇದರಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೂ ಗಮನ ಹರಿಸಲಾಗಿದ್ದು, ರಾಜ್ಯದ ಎಲ್ಲ ಭಾಗಗಳಲ್ಲೂ ಹೂಡಿಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT