ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಟಾಲ್‌ಗಳಿಗೆ ಭೇಟಿ ನೀಡಿದರು. 
ರಾಜ್ಯ

ಸಂಚಾರ ನಿಯಮ ಉಲ್ಲಂಘನೆ ತಡೆಗೆ ಕೃತಕ ಬುದ್ಧಿಮತ್ತೆ ಬಳಕೆ: ಡಿಕೆ.ಶಿವಕುಮಾರ್

ಸಂಚಾರ ಸಮಸ್ಯೆ ಸುಧಾರಿಸಲು ಮತ್ತು ಉಲ್ಲಂಘನೆಗಳನ್ನು ತಡೆಯಲು ಕೃತಕ ಬುದ್ಧಿಮತ್ತೆಯನ್ನು ಅಸ್ತ್ರವಾಗಿ ಬಳಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಸಂಚಾರ ಸಮಸ್ಯೆ ಸುಧಾರಿಸಲು ಮತ್ತು ಉಲ್ಲಂಘನೆಗಳನ್ನು ತಡೆಯಲು ಕೃತಕ ಬುದ್ಧಿಮತ್ತೆಯನ್ನು ಅಸ್ತ್ರವಾಗಿ ಬಳಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ 6,000 ಕ್ಕೂ ಹೆಚ್ಚು ಚಾಲನಾ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ಆದರೆ, ದ್ವಿಚಕ್ರ ವಾಹನಗಳಿಂದಾಗುತ್ತಿರುವ ಅಪಘಾತಗಳ ತಡೆಯುವತ್ತ ಹೆಚ್ಚಿನ ಗಮನಹರಿಸಬೇಕಿದೆ. ದ್ವಿಚಕ್ರ ವಾಹನ ಸವಾರರು ಮರೆಯದೆ ಹೆಲ್ಮೆಟ್ ಗಳನ್ನು ಧರಿಸಬೇಕು. ಸಾರ್ವಜನಿಕರು ಜೀವಕ್ಕೆ ಹೆಚ್ಚಿನ ಆದ್ಯತೆ ನೀಡಿ, ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ನಗರದ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ಎರಡರಲ್ಲೂ ತ್ವರಿತ ಹೆಚ್ಚಳಗಳು ಕಂಡು ಬರುತ್ತಿದೆ. ಇದರಿಂದ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗುತ್ತಿದೆ. ಇದನ್ನು ತಗ್ಗಿಸಲು, ಇತರ ರಾಷ್ಟ್ರಗಳ ಸಂಚಾರ ನಿರ್ವಹಣಾ ಮಾದರಿಗಳನ್ನು ಪರಿಶೀಲಿಸಿ, ಸಮಗ್ರ ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT