ಪೊಲೀಸರಿಗೆ ಸಿಪಿಆರ್ ತರಬೇತಿ 
ರಾಜ್ಯ

2,200 ಪೊಲೀಸರಿಗೆ ಸಿಪಿಆರ್ ತರಬೇತಿ: ವಿಶ್ವ ದಾಖಲೆ ನಿರ್ಮಾಣ

ಏಕಕಾಲದಲ್ಲಿ 2,200 ಪೊಲೀಸರಿಗೆ ಸಿಪಿಆರ್ ತರಬೇತಿ ನೀಡುವ ಮೂಲಕ ಸರ್ಜಿಕಲ್‌ ಸೊಸೈಟಿ ಆಫ್ ಬೆಂಗಳೂರು ಸಂಸ್ಥೆ ವಿಶ್ವ ದಾಖಲೆ ನಿರ್ಮಾಣ ಮಾಡಿದೆ.

ಬೆಂಗಳೂರು: ಏಕಕಾಲದಲ್ಲಿ 2,200 ಪೊಲೀಸರಿಗೆ ಸಿಪಿಆರ್ ತರಬೇತಿ ನೀಡುವ ಮೂಲಕ ಸರ್ಜಿಕಲ್‌ ಸೊಸೈಟಿ ಆಫ್ ಬೆಂಗಳೂರು ಸಂಸ್ಥೆ ವಿಶ್ವ ದಾಖಲೆ ನಿರ್ಮಾಣ ಮಾಡಿದೆ.

ಹೌದು.. ಸರ್ಜಿಕಲ್‌ ಸೊಸೈಟಿ ಆಫ್ ಬೆಂಗಳೂರು ಸಂಸ್ಥೆ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 2,200ಕ್ಕೂ ಅಧಿಕ ಪೊಲೀಸರಿಗೆ ಹೃದಯ ಮತ್ತು ಶ್ವಾಸಕೋಶ ಕಾಯಿಲೆಗೆ ಸಂಬಂಧಿಸಿದ ತರಬೇತಿ (ಸಿಪಿಆರ್) ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ ನೀಡಲಾಯಿತು. ಆ ಮೂಲಕ ಒಂದೇ ಸ್ಥಳದಲ್ಲಿ ಅತೀ ಹೆಚ್ಚು ಮಂದಿಗೆ ತರಬೇತಿ ನೀಡಿದ ಸಂಸ್ಥೆಯ ಈ ಕಾರ್ಯಕ್ಕೆ ವರ್ಲ್ಡ್‌ ರೆಕಾರ್ಡ್‌ ಆಫ್‌ ಲಂಡನ್‌ ಸಂಸ್ಥೆಯು ‘ವಿಶ್ವ ದಾಖಲೆ’ಯ ಪ್ರಮಾಣ ಪತ್ರ ನೀಡಿತು. 

ಸಂಸ್ಥೆ ಹಮ್ಮಿಕೊಂಡಿದ್ದ ಈ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಈ ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಪ್ರತಿಯೊಬ್ಬರೂ ಪಡೆಯಬೇಕು. ಇದರಿಂದ ತುರ್ತು ಸಂದರ್ಭದಲ್ಲಿ ವ್ಯಕ್ತಿಯ ಜೀವ ಉಳಿಸಲು ಸಾಧ್ಯ. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಈ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ. ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪೊಲೀಸರು ಪ್ರತಿನಿತ್ಯ ವಿವಿಧ ರೀತಿಯ ಘಟನೆಗಳನ್ನು ನೋಡುತ್ತಾರೆ. ಆದ್ದರಿಂದ ಪ್ರಥಮ ಚಿಕಿತ್ಸೆ ಬಗ್ಗೆ ಅವರಿಗೆ ತರಬೇತಿ ನೀಡುವುದು ಅತ್ಯಗತ್ಯ. ಬಸ್ ನಿಲ್ದಾಣ ಸೇರಿ ವಿವಿಧ ಸಾರ್ವಜನಿಕ ಸ್ಥಳದಲ್ಲಿ ಹೃದಯಾಘಾತ ಸಂಭವಿಸಿದಲ್ಲಿ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗುತ್ತದೆ’ ಎಂದರು.

ಬೆಂಗಳೂರು ನಗರ ಪೊಲೀಸ್‌ ಕಮಿಷನರ್ ಬಿ. ದಯಾನಂದ್ ಅವರು ಮಾತನಾಡಿ, ‘ಸಿಪಿಆರ್ ಹಾಗೂ ಪ್ರಥಮ ಚಿಕಿತ್ಸೆ ತರಬೇತಿಯು ಜೀವ ಉಳಿಸಲು ಸಹಕಾರಿಯಾಗಲಿದೆ. ನಮ್ಮ ಸಿಬ್ಬಂದಿಯನ್ನು ರಕ್ಷಿಸಲು ಸಹ ಇದರಿಂದ ಸಾಧ್ಯವಾಗಲಿದೆ. ಸಾಮಾನ್ಯ ನಾಗರಿಕರ ರಕ್ಷಣೆಗೂ ಇದು ಪ್ರಯೋಜನಕಾರಿ’ ಎಂದು ಹೇಳಿದರು.

ಸರ್ಜಿಕಲ್‌ ಸೊಸೈಟಿ ಆಫ್‌ ಬೆಂಗಳೂರು ಸಂಸ್ಥೆ ಅಧ್ಯಕ್ಷ ಡಾ. ರಾಜಶೇಖರ್‌ ಸಿ. ಜಕ್ಕಾ ಮಾತನಾಡಿ, ‘ಹಠಾತ್ ಹೃದಯಾಘಾತದ ಸಂದರ್ಭದಲ್ಲಿ ವ್ಯಕ್ತಿಯನ್ನು ಪ್ರಾಣಾ‍ಪಾಯದಿಂದ ಪಾರು ಮಾಡಲು ಸಿಪಿಆರ್ ಸಹಾಯಕ. ನಮ್ಮ ಸಂಸ್ಥೆಯ 50ನೇ ವರ್ಷಾಚರಣೆ ಪ್ರಯುಕ್ತ ವರ್ಷ ಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು ಘಟಕವು ತನ್ನ 50 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ವರ್ಷದಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT