ಸಿಎಂ ಸಿದ್ದರಾಮಯ್ಯ 
ರಾಜ್ಯ

ಕೃಷಿಕ-ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಬಾಳು ಬಂಗಾರವಾಗಲಿ: ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿದ ಸಿಎಂ

ನಾಡಿನಾದ್ಯಂತ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ಹಬ್ಬಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: ನಾಡಿನಾದ್ಯಂತ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ಹಬ್ಬಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿ ಶಾಂತಿ,‌ ಸೌಹಾರ್ದತೆ, ಸಮೃದ್ಧಿಯ ಕಡೆಗೆ ನಾಡನ್ನು ಮುನ್ನಡೆಸಲಿ. ನಾಡು ಸಮೃದ್ಧ ಮಳೆ, ಬೆಳೆ ಕಂಡು ಕೃಷಿಕ - ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಅವರ ಬಾಳು ಬಂಗಾರವಾಗಲಿ.ನಾಡ ಬಾಂಧವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಬಾರಿಯ ಸುಗ್ಗಿ ಹಬ್ಬವು ನಮ್ಮ ನಾಡಿಗೆ ಹಾಗೂ ರೈತರ ಬದುಕಲ್ಲಿ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಪೋಸ್ಟ್ ಮಾಡಿದ್ದು, ನಾಡಿನ ಜನತೆಗೆ ಶುಭಾಶಯಗಗಳನ್ನು ಕೋರಿದ್ದಾರೆ.

ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ, ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಸಲಿ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ರೈತ ಕಾಯಕದ ಸಂಭ್ರಮಕ್ಕೆ ಸಾಕ್ಷಿಯಾಗಿರುವ ಸುಗ್ಗಿಯ ಹಬ್ಬವು ನಾಡಿನೆಲ್ಲೆಡೆ ನೆಮ್ಮದಿ ನೆಲೆಸಿ, ಎಲ್ಲರ ಬದುಕಿನಲ್ಲಿ ಸುಖ, ಸಂತೋಷ, ಸಮೃದ್ಧಿಯನ್ನು ಹೊತ್ತು ತರಲೆಂದು ಶುಭ ಹಾರೈಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ಕರ್ನಾಟಕದ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

SCROLL FOR NEXT