ಗವಿ ಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ 
ರಾಜ್ಯ

ಬೆಂಗಳೂರು: ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ!

ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಇಂದು ಸಂಜೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗದ ಮೇಲೆ ಬಿದ್ದಿತು. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ  ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿತು. 

ಬೆಂಗಳೂರು: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಇಂದು ಸಂಜೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗದ ಮೇಲೆ ಬಿದ್ದಿತು. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ  ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿತು. 

ಸಂಜೆ 5.20 ರಿಂದ 5.23 ನಿಮಿಷದವರೆಗೆ ಸೂರ್ಯರಶ್ಮಿ ನಂದಿಕೊಂಬಿನ ಮೂಲಕ ಹಾದುಹೋಗಿ ಶಿವನಿಗೆ ನಮಿಸಿತು. ಅಸಂಖ್ಯಾತ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಈ ಕೌತುಕವನ್ನು ಕಣ್ತುಂಬಿಕೊಂಡರು. ಈ ವಿಸ್ಮಯವನ್ನು ನೋಡಲು ದೇವಾಲಯದ ಹೊರಭಾಗದಲ್ಲಿ ಎರಡು ಎಲ್‌ಇಡಿ ಹಾಗೂ ಐದು ಟಿವಿಗಳ ವ್ಯವಸ್ಥೆ ಮಾಡಲಾಗಿತ್ತು. 

ಈ ವೇಳೆ ಅರ್ಚಕರನ್ನು ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಒಳ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ದೇವಸ್ಥಾನದಲ್ಲಿ ಹೋಮ, ಹವನಗಳು ನಡೆದವು. . ಅರ್ಚಕರು ಶಿವಲಿಂಗದ ಮೇಲೆ ಎಳನೀರು ಅಭಿಷೇಕ ಮಾಡಿದರು. ಕೆಲ ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿ ಮರೆಯಾಯಿತು.

ಈ ವಿಶೇಷ ದಿನಕ್ಕಾಗಿ ಬೆಳ್ಳಗ್ಗೆ 5 ಗಂಟೆಯಿಂದಲೇ ಗಂಗಾಧರನಿಗೆ ವಿಶೇಷ ಪೂಜೆ ಆರಂಭವಾಗಿತ್ತು. ಗಂಗಾಧರನಿಗೆ ಪಂಚಾಭೀಷೇಕ, ಪುಷ್ಪಾಭಿಷೇಕ, ಮಹಮಂಗಳಾರತಿ‌ ಮಾಡಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸಾವಿರಾರು ಮಂದಿ ಭಕ್ತರು ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ, ಪುನಸ್ಕಾರಗಳೊಂದಿಗೆ ದೇವರ ದರ್ಶನ ಪಡೆದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ