ಜಿ ಪರಮೇಶ್ವರ 
ರಾಜ್ಯ

ಗ್ಯಾಂಗ್‌ರೇಪ್ ಪ್ರಕರಣ: ಬಿಜೆಪಿ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ ಆಡಳಿತ ನಡೆಸಲು ಸಾಧ್ಯವಿಲ್ಲ: ಜಿ ಪರಮೇಶ್ವರ

ನೈತಿಕ ಪೊಲೀಸ್ ಗಿರಿ ನಡೆಸಿದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂಬ ಬಿಜೆಪಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ, 'ಬಿಜೆಪಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ, ನಾವು ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಬೆಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂಬ ಬಿಜೆಪಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ, 'ಬಿಜೆಪಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ, ನಾವು ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಿಜೆಪಿ ನಾಯಕರು ಎಸ್‌ಐಟಿ ಮತ್ತು ಸಿಬಿಐ, ಸಿಐಡಿ ಮತ್ತು ಇತರ ಸಂಸ್ಥೆಗಳಿಂದ ತನಿಖೆ ನಡೆಸುವಂತೆ ಒತ್ತಾಯಿಸುತ್ತಾರೆ. ಬಿಜೆಪಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ, ನಾವು ಆಡಳಿತ ನಡೆಸಲು ಸಾಧ್ಯವಿಲ್ಲ. ಅಧಿಕಾರದಲ್ಲಿದ್ದಾಗ ಅವರು ನಮ್ಮ ಮಾತನ್ನು ಕೇಳಿದ್ದರಾ? ನಾವು ವಿರೋಧ ಪಕ್ಷದಲ್ಲಿದ್ದಾಗ ಅವರು ನಮ್ಮ ಬೇಡಿಕೆಗಳಿಗೆ ಹೇಗೆ ಸ್ಪಂದಿಸಿದರು? ಎಂದರು.

'ನಾವು ಜನಪರ ಸರ್ಕಾರ ನೀಡುವುದಾಗಿ ಭರವಸೆ ನೀಡಿದ್ದೇವೆ ಮತ್ತು ನಾವು ನಮ್ಮ ಮಾತನ್ನು ಉಳಿಸಿಕೊಳ್ಳುತ್ತೇವೆ' ಎಂದು ಅವರು ಹೇಳಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದೆ. 'ತನಿಖೆ ಮುಗಿಯಲಿ. ಅಲ್ಲಿವರೆಗೆ ಈ ವಿಚಾರದಲ್ಲಿ ನನ್ನ ಅಭಿಪ್ರಾಯ ನೀಡುವುದಿಲ್ಲ. ಈ ಸಂಬಂಧ ಪೊಲೀಸರು ಏಳೆಂಟು ಮಂದಿಯನ್ನು ಬಂಧಿಸಿದ್ದಾರೆ ಎಂದರು.

'ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಇನ್ಸ್‌ಪೆಕ್ಟರ್ ಅನ್ನು ಅಮಾನತುಗೊಳಿಸಲಾಗಿದೆ. ತನಿಖೆ ಪೂರ್ಣಗೊಳ್ಳಲಿ. ವರದಿ ಬಂದ ನಂತರ ನೋಡೋಣ' ಎಂದರು.

ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಗಳು ನಡೆದಿವೆ ಮತ್ತು ಹಾನಗಲ್ ಘಟನೆಯ ಪ್ರಕರಣವನ್ನು ಮುಚ್ಚಿಹಾಕಲು ಹಾವೇರಿ ಪೊಲೀಸರು ಸಂತ್ರಸ್ತೆಗೆ ಹಣ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಆರೋಪಿಸಿದರು. ಘಟನೆಯ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಬೇಕು ಎಂದು ಒತ್ತಾಯಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!