ಜಿ ಪರಮೇಶ್ವರ 
ರಾಜ್ಯ

ಗ್ಯಾಂಗ್‌ರೇಪ್ ಪ್ರಕರಣ: ಬಿಜೆಪಿ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ ಆಡಳಿತ ನಡೆಸಲು ಸಾಧ್ಯವಿಲ್ಲ: ಜಿ ಪರಮೇಶ್ವರ

ನೈತಿಕ ಪೊಲೀಸ್ ಗಿರಿ ನಡೆಸಿದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂಬ ಬಿಜೆಪಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ, 'ಬಿಜೆಪಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ, ನಾವು ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಬೆಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂಬ ಬಿಜೆಪಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ, 'ಬಿಜೆಪಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ, ನಾವು ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಿಜೆಪಿ ನಾಯಕರು ಎಸ್‌ಐಟಿ ಮತ್ತು ಸಿಬಿಐ, ಸಿಐಡಿ ಮತ್ತು ಇತರ ಸಂಸ್ಥೆಗಳಿಂದ ತನಿಖೆ ನಡೆಸುವಂತೆ ಒತ್ತಾಯಿಸುತ್ತಾರೆ. ಬಿಜೆಪಿಯ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತಾ ಹೋದರೆ, ನಾವು ಆಡಳಿತ ನಡೆಸಲು ಸಾಧ್ಯವಿಲ್ಲ. ಅಧಿಕಾರದಲ್ಲಿದ್ದಾಗ ಅವರು ನಮ್ಮ ಮಾತನ್ನು ಕೇಳಿದ್ದರಾ? ನಾವು ವಿರೋಧ ಪಕ್ಷದಲ್ಲಿದ್ದಾಗ ಅವರು ನಮ್ಮ ಬೇಡಿಕೆಗಳಿಗೆ ಹೇಗೆ ಸ್ಪಂದಿಸಿದರು? ಎಂದರು.

'ನಾವು ಜನಪರ ಸರ್ಕಾರ ನೀಡುವುದಾಗಿ ಭರವಸೆ ನೀಡಿದ್ದೇವೆ ಮತ್ತು ನಾವು ನಮ್ಮ ಮಾತನ್ನು ಉಳಿಸಿಕೊಳ್ಳುತ್ತೇವೆ' ಎಂದು ಅವರು ಹೇಳಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿದೆ. 'ತನಿಖೆ ಮುಗಿಯಲಿ. ಅಲ್ಲಿವರೆಗೆ ಈ ವಿಚಾರದಲ್ಲಿ ನನ್ನ ಅಭಿಪ್ರಾಯ ನೀಡುವುದಿಲ್ಲ. ಈ ಸಂಬಂಧ ಪೊಲೀಸರು ಏಳೆಂಟು ಮಂದಿಯನ್ನು ಬಂಧಿಸಿದ್ದಾರೆ ಎಂದರು.

'ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಇನ್ಸ್‌ಪೆಕ್ಟರ್ ಅನ್ನು ಅಮಾನತುಗೊಳಿಸಲಾಗಿದೆ. ತನಿಖೆ ಪೂರ್ಣಗೊಳ್ಳಲಿ. ವರದಿ ಬಂದ ನಂತರ ನೋಡೋಣ' ಎಂದರು.

ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಗಳು ನಡೆದಿವೆ ಮತ್ತು ಹಾನಗಲ್ ಘಟನೆಯ ಪ್ರಕರಣವನ್ನು ಮುಚ್ಚಿಹಾಕಲು ಹಾವೇರಿ ಪೊಲೀಸರು ಸಂತ್ರಸ್ತೆಗೆ ಹಣ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಆರೋಪಿಸಿದರು. ಘಟನೆಯ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಬೇಕು ಎಂದು ಒತ್ತಾಯಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT