ಸಾಂದರ್ಭಿಕ ಚಿತ್ರ 
ರಾಜ್ಯ

ಹಡಗುಗಳ ಮೇಲೆ ಹೌತಿ ದಾಳಿ: ದಕ್ಷಿಣ ಕನ್ನಡದಿಂದ ಗೋಡಂಬಿ ರಫ್ತಿನ ಮೇಲೆ ತೀವ್ರ ಪರಿಣಾಮ

ಯೆಮೆನ್‌ನ ಹೆಚ್ಚಿನ ಭಾಗಗಳನ್ನು ನಿಯಂತ್ರಿಸುವ ಹೌತಿ ಬಂಡುಕೋರರು ಗಾಜಾಗೆ ಬೆಂಬಲ ಸೂಚಿಸಲು ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ದಾಳಿ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗೋಡಂಬಿ ಉದ್ಯಮದ ಮೇಲೆ ತೀವ್ರ ಪರಿಣಾಮ...

ಮಂಗಳೂರು: ಯೆಮೆನ್‌ನ ಹೆಚ್ಚಿನ ಭಾಗಗಳನ್ನು ನಿಯಂತ್ರಿಸುವ ಹೌತಿ ಬಂಡುಕೋರರು ಗಾಜಾಗೆ ಬೆಂಬಲ ಸೂಚಿಸಲು ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ದಾಳಿ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗೋಡಂಬಿ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಿದೆ.

ದಕ್ಷಿಣ ಕನ್ನಡದಲ್ಲಿ ಸುಮಾರು 250 ಗೋಡಂಬಿ ಕೈಗಾರಿಕೆಗಳಿವೆ ಮತ್ತು ಜಿಲ್ಲೆಯು ವರ್ಷಕ್ಕೆ ಸುಮಾರು 5,800 ಟನ್ ಗೋಡಂಬಿಯನ್ನು ರಫ್ತು ಮಾಡುತ್ತದೆ. ವರ್ಷಕ್ಕೆ 2,45,000 ಟನ್ ಗೋಡಂಬಿಯನ್ನು ಜಿಲ್ಲೆ ಉತ್ಪಾದಿಸುತ್ತದೆ.

ಕರ್ನಾಟಕ ಗೋಡಂಬಿ ತಯಾರಕರ ಸಂಘದ(ಕೆಸಿಎಂಎ) ಮಾಜಿ ಅಧ್ಯಕ್ಷ ಹಾಗೂ ಮಂಗಳೂರು ಮೂಲದ ಕಲ್ಬಾವಿ ಕನ್ಸೂಮರ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ಬ್ರೇಕ್-ಬಲ್ಕ್ ಕಚ್ಚಾ ಗೋಡಂಬಿ ಆಮದುದಾರರಲ್ಲಿ ಒಬ್ಬರಾದ ಕಲ್ಬಾವಿ ಪ್ರಕಾಶ್ ರಾವ್ ಅವರು, ಹೌತಿ ದಾಳಿ ನಂತರ ನಾವು ಆಫ್ರಿಕಾಗೆ ಗೋಡಂಬಿ ರಫ್ತು ಮಾಡುತ್ತಿದ್ದೇವೆ ಎಂದು ತಿಳಿಸಿದರು. 

ಆದಾಗ್ಯೂ, ಕೆಂಪು ಸಮುದ್ರದ ಬಿಕ್ಕಟ್ಟಿನಿಂದಾಗಿ, ಹಡಗುಗಳು ಈಗ ಆಫ್ರಿಕಾದ ದಕ್ಷಿಣ ತುದಿಯಲ್ಲಿರುವ ಕೇಪ್ ಆಫ್ ಗುಡ್ ಹೋಪ್ ಮೂಲಕ ಸಂಚರಿಸುವಂತಾಗಿದೆ. ಇದರಿಂದ ಯುರೋಪ್ ಗೆ 6,300 ನಾಟಿಕಲ್ ಮೈಲುಗಳು ಮತ್ತು 15 ದಿನ ಹೆಚ್ಚುವರಿಯಾಗಿ ಹಡಗುಗಳು ಸಂಚರಿಸುತ್ತಿವೆ ಎಂದು ಅವರು ಹೇಳಿದ್ದಾರೆ.

"ಹಡಗುಗಳು ಬಳಸಿಕೊಂಡು ಹೋಗಬೇಕಾಗಿರುವುದರಿಂದ ದಕ್ಷಿಣ ಕನ್ನಡದಿಂದ ಗೋಡಂಬಿ ರಫ್ತುದಾರರು ಸಮುದ್ರದ ಸರಕು ಸಾಗಣೆಗೆ ಪ್ರತಿ ಕಂಟೇನರ್‌ಗೆ 2000 ಡಾಲರ್ ಹೆಚ್ಚು ನೀಡುತ್ತಿದ್ದಾರೆ ಮತ್ತು 19,000 ಕ್ಕೂ ಹೆಚ್ಚು ಹಡಗುಗಳು ಕೆಂಪು ಸಮುದ್ರದ ಸುರಕ್ಷಿತ ನೀರಿನಲ್ಲಿ ಸಿಲುಕಿಕೊಂಡಿವೆ. ಇದರಿಂದಾಗಿ ಸರಕು ಸಾಗಣೆಯಲ್ಲಿ ಭಾರಿ ವಿಳಂಬವಾಗಬಹುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT