ಸಾಂದರ್ಭಿಕ ಚಿತ್ರ 
ರಾಜ್ಯ

ಹಿಂದೂ ಬಾಲಕಿಯೊಂದಿಗೆ ಮುಸ್ಲಿಂ ಯುವಕ ಪರಾರಿ; 'ಲವ್ ಜಿಹಾದ್' ಆರೋಪ!

ಮುಸ್ಲಿಂ ಹುಡುಗ ಹಾಗೂ 15 ವರ್ಷದ ಹಿಂದೂ ಯುವತಿ ಪರಾರಿಯಾಗಿದ್ದ ಪ್ರಕರಣ ಕೋಮು ತಿರುವು ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದನ್ನು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ.

ಮಂಡ್ಯ: ಮುಸ್ಲಿಂ ಹುಡುಗ ಹಾಗೂ 15 ವರ್ಷದ ಹಿಂದೂ ಯುವತಿ ಪರಾರಿಯಾಗಿದ್ದ ಪ್ರಕರಣ ಕೋಮು ತಿರುವು ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಇದನ್ನು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ.

ಘಟನೆ ಕೆಆರ್ ಪೇಟೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿ 19 ವರ್ಷದ ಸೈಯದ್ ತಬ್ರೇಜ್ ಜನವರಿ 12 ರಂದು ಹಿಂದೂ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕಿಯೊಂದಿಗೆ ಓಡಿಹೋಗಿದ್ದ. ಇಬ್ಬರೂ ಕೆಆರ್ ಪೇಟೆಯ ನಿವಾಸಿಗಳು.

ಮುಸ್ಲಿಂ ಹುಡುಗನ ವಿರುದ್ಧ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಪೊಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರನ್ನು ಪತ್ತೆಹಚ್ಚಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಕೆಆರ್ ಪೇಟೆಯಲ್ಲಿ ಹಿಂದೂ ಹುಡುಗಿಯರನ್ನು ಗುರಿಯಾಗಿಸಿಕೊಳ್ಳಲಾಗುತ್ತಿದೆ. ಇತರ ಸಮುದಾಯದವರು ಲವ್ ಜಿಹಾದ್ ಮಾಡಲು ಯುವಕರನ್ನು ಪ್ರೇರೇಪಿಸುತ್ತಿದ್ದಾರೆ. ಈ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕು ಎಂದು ಹಿಂದೂ ಕಾರ್ಯಕರ್ತರು ಒತ್ತಾಯಿಸಿದರು.

ಪೊಲೀಸರು ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT