ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ.

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ.

ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಬಜೆಟ್ ನಲ್ಲಿ ಹಣ ನಿಗದಿ ಮಾಡುತ್ತೇನೆ. ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಿಸಲಾಗುವುದು ಮತ್ತು ಬೆಂಗಳೂರು ನಗರದಲ್ಲಿ 8 ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಜಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 

2013 ರಿಂದ ಪೊಲೀಸರ ವೈದ್ಯಕೀಯ ತಪಾಸಣೆ ಭತ್ಯೆಯನ್ನ ಹೆಚ್ಚಿಸಿರಲಿಲ್ಲ. ಪೊಲೀಸ್ ಸಿಬ್ಬಂದಿಯ ವೈದ್ಯಕೀಯ ತಪಾಸಣೆ ಭತ್ಯೆ 500 ರೂ. ಹೆಚ್ಚಳ ಮಾಡುತ್ತೇವೆ. ಈ ಹಿಂದೆ 1 ಸಾವಿರ ನೀಡಲಾಗಿತ್ತು, ಈಗ 1,500 ರೂ.ಗೆ ಹೆಚ್ಚಿಸಿದ್ದೇವೆ ಎಂದು ಸಿಎಂ ತಿಳಿಸಿದರು.

ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸಿಎಂ ಎಚ್ಚರಿಕೆ ನೀಡಿದರು.

ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!