ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಚಾಲಕ ಬ್ರೇಕ್ ಹಾಕಿದ ರಭಸಕ್ಕೆ ಬಸ್ ನಿಂದ ಹೊರಗೆ ಹಾರಿದ ಮಹಿಳೆ ಸ್ಥಳದಲ್ಲೇ ಸಾವು!

ಖಾಸಗಿ ಬಸ್ ಚಾಲಕನ ಅತಿರೇಕ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಸ್ಸಿನಿಂದ ಕೆಳಗೆ ಬಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ  ನಡೆದಿದೆ.

ಮಂಗಳೂರು: ಖಾಸಗಿ ಬಸ್ ಚಾಲಕನ ಅತಿರೇಕ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಸ್ಸಿನಿಂದ ಕೆಳಗೆ ಬಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.

65 ವರ್ಷದ ಈರಮ್ಮ ಎಂಬ ಮಹಿಳೆ ತನ್ನ ಮಗಳೊಂದಿಗೆ ಖಾಸಗಿ ಬಸ್‌ನಲ್ಲಿ ಸುರತ್ಕಲ್‌ಗೆ ತೆರಳುತ್ತಿದ್ದರು. ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್‌ಗೆ ಬಸ್ ತಲುಪಿದಾಗ, ಬಸ್‌ನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಚಾಲಕನ ಪಕ್ಕದಲ್ಲಿ ಮುಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ.

ಬಸ್ಸಿನ ಹಿಂಬದಿಯ ಚಕ್ರ ಈರಮ್ಮ ಅವರ ಮೇಲೆ ಹರಿದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ಸಂಚಾರ ಪೊಲೀಸರು ಬಸ್ ಚಾಲಕ ಅನಿಲ್ ಜಾನ್ ಲೋಬೋ ವಿರುದ್ಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 42 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

ವಾರ ಭವಿಷ್ಯ: ದ್ವಾದಶ ರಾಶಿಗಳ ಫಲಾಫಲ

ಸಚಿವ ಸಂಪುಟ ಪುನಾರಚನೆಗೆ ಸಿದ್ದು ಸಿದ್ಧತೆ ಬೆನ್ನಲ್ಲೇ ಹೈಕಮಾಂಡ್ ಭೇಟಿಯಾದ ಡಿಕೆ ಬ್ರದರ್ಸ್: ಚರ್ಚೆ ಕುರಿತು ತೀವ್ರ ಕೂತೂಹಲ

SCROLL FOR NEXT