ಸಾಂದರ್ಭಿಕ ಚಿತ್ರ 
ರಾಜ್ಯ

ಕಳೆದ 3 ವರ್ಷಗಳಲ್ಲಿ 49 ಸಾವಿರ ಅಪ್ರಾಪ್ತೆಯರು ಗರ್ಭಿಣಿ: ಆತಂಕಕಾರಿ ಮಾಹಿತಿ ಬಿಡುಗಡೆ

ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 49 ಸಾವಿರ ಬಾಲಕಿಯರು ಗರ್ಭಿಣಿಯರಾಗಿರುವ ಅಂಶ ಬೆಳಕಿಗೆ ಬಂದಿದೆ. 

ಮಂಗಳೂರು : ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 49 ಸಾವಿರ ಬಾಲಕಿಯರು ಗರ್ಭಿಣಿಯರಾಗಿರುವ ಅಂಶ ಬೆಳಕಿಗೆ ಬಂದಿದೆ.  ಸುಮಾರು 49 ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಕಳವಳ ವ್ಯಕ್ತ ಪಡಿಸಿದ್ದಾರೆ.

ಈ ಸಂಖ್ಯೆ ಅತ್ಯಂತ ಆತಂಕಾರಿಯಾಗಿದ್ದು, ಮತ್ತೆ ಡಿಎಚ್ಒ ಹಾಗೂ ಆಶಾ - ಅಂಗನವಾಡಿ ಕಾರ್ಯಕರ್ತೆಯರ ಮಟ್ಟದಲ್ಲಿಮರು ಸಮೀಕ್ಷೆ ಮಾಡಲಾಗುತ್ತದೆ. ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅಪ್ರಾಪ್ತ ಗರ್ಭಿಣಿಯರಲ್ಲಿಯೇ ಕೂಲಂಕಷವಾಗಿ ಮಾಹಿತಿ ಪಡೆದು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ, ಮಂಡ್ಯ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆ. ಹದಿನೆಂಟು ತುಂಬುವ ಮೊದಲೇ ವಿವಾಹ, ಅತ್ಯಾಚಾರ, ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಹೀಗೆ ಹಲವಾರು ರೀತಿಯಲ್ಲಿ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಬಯಲಾಗುತ್ತಿದೆ.

ಕೆಲವೊಂದು ಪ್ರಕರಣಗಳಲ್ಲಿ ಸಂತ್ರಸ್ತೆಯರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳೂ ಬೆಳಕಿಗೆ ಬಂದಿದೆ. ಇಂತಹ ಪ್ರಕರಣಗಳನ್ನು ಮುಚ್ಚಿಟ್ಟ ವಿಚಾರದಲ್ಲಿ ಈಗಾಲೇ 6 - 7 ವೈದ್ಯರ ಮೇಲೆಯೇ ಪ್ರಕರಣ ದಾಖಲಾಗಿದೆ. ಅಲ್ಲದೆ ಒಂದೆರಡು ನರ್ಸಿಂಗ್ ಹೋಮ್‌ಗಳನ್ನೇ ಮುಚ್ಚಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರ ವರದಿಯಾಗಿದ್ದು, ಉಡುಪಿಯಲ್ಲಿ ಅತಿ ಕಡಿಮೆ. ಹೆಚ್ಚಿನ ಜಿಲ್ಲೆಗಳಲ್ಲಿ 1,500-2,000 ಪ್ರಕರಣಗಳು ವರದಿಯಾಗಿವೆ. ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಗೆ "ಪ್ರೇಮ ಸಂಬಂಧ" ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಕೆಲವು ಹೆರಿಗೆಗಳು ಮನೆಯಲ್ಲಿ ನಡೆದಿವೆ, ಅನೇಕ ಸಂದರ್ಭಗಳಲ್ಲಿ ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅವರು ಹೇಳಿದರು.

ಅಪ್ರಾಪ್ತ ವಯಸ್ಸಿನ ಗರ್ಭಪಾತಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಯೋಗವು ನಿರ್ಧರಿಸಿದೆ. ಕಾನೂನು ಕ್ರಮವು ಸಂತ್ರಸ್ತರು ಮತ್ತು ಅವರ ಕುಟುಂಬದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ಪೋಕ್ಸೊ ಅಡಿಯಲ್ಲಿ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅವನ ಹೆಂಡತಿಯ ಭವಿಷ್ಯವೇನು? ಮಂಡ್ಯದಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಬಾಲಕನ ವಿರುದ್ಧ ಕಾನೂನು ಕ್ರಮ ಕೈಗೊಂಡ ನಂತರ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಆರೋಪಿಗಳು ಮಾತ್ರವಲ್ಲದೆ, ಅಂತಹ ಬಾಲಕಿಯರಿಗೆ ವೈದ್ಯಕೀಯ ನೆರವು ನೀಡಿದ ವೈದ್ಯರು ಮತ್ತು ಇತರರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಾ.ನಾಗನಗೌಡ ಹೇಳಿದರು. ಹೈಸ್ಕೂಲ್ ಮತ್ತು ಪಿಯು ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಆಯೋಗ ಕ್ರಮ ಕೈಗೊಂಡಿದೆ.

ಆದ್ದರಿಂದ ಮಕ್ಕಳಿಗೆ 18ವರ್ಷದವರೆಗೆ ಕಡ್ಡಾಯವಾಗಿ ಶಿಕ್ಷಣ ಪಡೆಯುವಂತೆ ಮಾಡಬೇಕು. ಅದಕ್ಕಾಗಿ ಡಿಡಿಪಿಐ ಹಾಗೂ ಬಿಇಒ ಅವರುಗಳು ಮಕ್ಕಳು 18ವರ್ಷಗಳವರೆಗೆ ಶಾಲೆ - ಕಾಲೇಜು ತೊರೆಯದಂತೆ ಗಮನಹರಿಸಬೇಕು. ಶೇ. 90  ಬಾಲ್ಯ ಕಾರ್ಮಿಕ, ಬಾಲ್ಯ ವಿವಾಹವನ್ನು ತಪ್ಪಿಸಿದಂತಾಗುತ್ತದೆ ಎಂದು ನಾಗಣ್ಣ ಗೌಡ ಹೇಳಿದರು.

ವಲಸೆ ಕಾರ್ಮಿಕರು ಮತ್ತು ಭಿಕ್ಷುಕರ ಮಕ್ಕಳಿಗೆ ಆರು ತಿಂಗಳ ಬ್ರಿಡ್ಜ್ ಕೋರ್ಸ್ ನೀಡಲು ಮಂಗಳೂರಿನಲ್ಲಿ ಬಾಲಕಾರ್ಮಿಕರ ಶಾಲೆಯನ್ನು ಶೀಘ್ರದಲ್ಲೇ ತೆರೆಯಲಾಗುವುದು ಎಂದು ಡಾ.ನಾಗನಗೌಡ ಹೇಳಿದರು.

ಅವರನ್ನು ನೇರವಾಗಿ ಶಾಲೆಗೆ ಕಳುಹಿಸಿದರೆ, ಅವರು ಪಾಠಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ ಮತ್ತು ಅಂತಿಮವಾಗಿ ಶಾಲೆ ಬಿಡುತ್ತಾರೆ. ಹಾಗಾಗಿ ಬ್ರಿಡ್ಜ್ ಕೋರ್ಸ್ ಅವರಿಗೆ ನೆರವಾಗಲಿದೆ. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಸಂಬಂಧಿಸಿದ ನಾಲ್ಕು ಇಲಾಖೆಗಳ ನಡುವೆ ಸಮನ್ವಯತೆಯ ಕೊರತೆ ಇದೆ ಎಂದು ದೂರಿದ ಅವರು ಆಯೋಗವು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಶಾಲಾ-ಕಾಲೇಜು ಹಾಸ್ಟೆಲ್‌ಗಳಲ್ಲಿ ಹದಿಹರೆಯದವರ ಆತ್ಮಹತ್ಯೆಗೆ ಸಂಬಂಧಿಸಿದಂತೆ, ಸಂಸ್ಥೆಗಳ ನಿರ್ಲಕ್ಷ್ಯಕ್ಕಾಗಿ ಪ್ರಕರಣ ದಾಖಲಿಸಲಾಗಿದೆ  ಎಂದು ಡಾ.ನಾಗನಗೌಡ ಹೇಳಿದರು. ಕಳೆದ ಒಂದು ವರ್ಷದಲ್ಲಿ 240 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT