ರಾಜ್ಯ

ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್‌ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Shilpa D

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಸಂಜೆ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಲಘು ಹೃದಯಾಘಾತವಾಗಿದ್ದು, ಸದ್ಯ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ. ಸದ್ಯ ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನ ಸಭಾಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಉದಯ ಗರುಡಾಚಾರ್​ ಗೆಲುವು ಸಾಧಿಸಿದ್ದರು. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಹಾಗೂ ಮಾಜಿ ಶಾಸಕ ಆರ್​. ವಿ ದೇವರಾಜ್​ ವಿರುದ್ಧ ಗೆಲುವು ಸಾಧಿಸಿದ್ದರು.

ಬುಧವಾರ ಬೆಳಗ್ಗೆ ಶಾಸಕ ಉದಯ್ ಗರುಡಾಚಾರ್ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ನಡೆಯುತ್ತಿರುವ ದೇವಾಲಯಗಳ ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

SCROLL FOR NEXT