ಕೆ.ಜೆ.ಜಾರ್ಜ್ 
ರಾಜ್ಯ

ಉಚಿತ ವಿದ್ಯುತ್: ವಾರ್ಷಿಕ ಸರಾಸರಿ ಮೇಲೆ ಶೇ.10ರಷ್ಟು ಬದಲು 10 ಯುನಿಟ್‌ ನೀಡಲು ಸಂಪುಟ ತೀರ್ಮಾನ

ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್‌ ನೀಡುವ ಮಾನದಂಡವನ್ನು 10 ಯೂನಿಟ್‌ ಗೆ...

ಬೆಂಗಳೂರು: ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್‌ ನೀಡುವ ಮಾನದಂಡವನ್ನು 10 ಯೂನಿಟ್‌ ಗೆ ಬದಲಾಯಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್‌ ಅವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತಾ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ ಶೇ. 10 ರಷ್ಟು ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ ಶೇ 10 ರಷ್ಟು ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿದೆ. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ ಶೇ. 10 ರಷ್ಟು ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ ಎಂದರು.

ಮುಂದಿ‌ನ ತಿಂಗಳ ಬಿಲ್‌ನಿಂದಲೇ ಇದನ್ನು ಜಾರಿ ಮಾಡುತ್ತೇವೆ. ಇದರಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 500 ಕೋಟಿ ರೂಪಾಯಿ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ.  ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ ಎಂದು ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT