ಸಾಂದರ್ಭಿಕ ಚಿತ್ರ 
ರಾಜ್ಯ

ರಾಮ ಮಂದಿರ ಉದ್ಘಾಟನೆ: ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಇಂದಿನಿಂದ 22ರ ವರೆಗೆ ಉಚಿತ ಹೆರಿಗೆ!

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.

ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.

ವಿಜಯಪುರದಲ್ಲಿ ಜೆಎಸ್‌ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಡೆಸುತ್ತಿರುವ 'ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್' ಈ ನಿರ್ಧಾರ ಪ್ರಕಟಿಸಿದೆ.

"ಅಯೋಧ್ಯೆಯಲ್ಲಿ ಇದೇ ಸೋಮವಾರ ನಡೆಯಲಿರುವ 'ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ'ಯನ್ನು ಆಚರಿಸಲು ಇಂದಿನಿಂದ(ಗುರುವಾರ) ಜನವರಿ 22 ರವರೆಗೆ ನಮ್ಮ ಆಸ್ಪತ್ರೆಯಲ್ಲಿ ಎಲ್ಲಾ ಹೆರಿಗೆಯನ್ನು ಉಚಿತವಾಗಿ ಮಾಡಲಾಗುತ್ತದೆ. ಇದು ಒಂದು ದೊಡ್ಡ ಸಂದರ್ಭವಾಗಿದ್ದು, ಈ ಸಮಯದಲ್ಲಿ ನಾವು ಮಹತ್ವದ ಕೊಡುಗೆ ನೀಡಲು ನಾವು ನಿರ್ಧರಿಸಿದ್ದೇವೆ. ಐದು ದಿನಗಳ ನಿರ್ದಿಷ್ಟ ಅವಧಿಗೆ ನಮ್ಮ ಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಹೆರಿಗೆಗಳನ್ನು ಉಚಿತವಾಗಿ ಮಾಡಲಾಗುತ್ತದೆ ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

"ಇಂದು, ಇಲ್ಲಿಯವರೆಗೆ, ನಾವು ಏಳು ಹೆರಿಗೆಗಳನ್ನು ಉಚಿತವಾಗಿ ಮಾಡಿದ್ದೇವೆ" ಎಂದು ಅವರು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಯ ಈ ಕ್ರಮವನ್ನು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶ್ಲಾಘಿಸಿದ್ದಾರೆ.

ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಜನವರಿ 18, 2024 ರಿಂದ ಜನವರಿ 22, 2024 ರವರೆಗೆ ಆಸ್ಪತ್ರೆಯಲ್ಲಿ ಜನಿಸಿದ ಗಂಡು ಮಗುವನ್ನು ರಾಮನ ರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಹೊಸದಾಗಿ ಹುಟ್ಟಿದ ಹೆಣ್ಣು ಮಗುವನ್ನು ಸೀತೆಯ ರೂಪವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಹೆರಿಗೆಯನ್ನು ಉಚಿತವಾಗಿ ಮಾಡಲಾಗುತ್ತಿದೆ. ಜೈ ಶ್ರೀ ರಾಮ್," ಎಂದು ಮಾಜಿ ಕೇಂದ್ರ ಸಚಿವ ಯತ್ನಾಳ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT