ಸಾಂದರ್ಭಿಕ ಚಿತ್ರ 
ರಾಜ್ಯ

ರಾಮ ಮಂದಿರ ಉದ್ಘಾಟನೆ: ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಇಂದಿನಿಂದ 22ರ ವರೆಗೆ ಉಚಿತ ಹೆರಿಗೆ!

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.

ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.

ವಿಜಯಪುರದಲ್ಲಿ ಜೆಎಸ್‌ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಡೆಸುತ್ತಿರುವ 'ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್' ಈ ನಿರ್ಧಾರ ಪ್ರಕಟಿಸಿದೆ.

"ಅಯೋಧ್ಯೆಯಲ್ಲಿ ಇದೇ ಸೋಮವಾರ ನಡೆಯಲಿರುವ 'ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ'ಯನ್ನು ಆಚರಿಸಲು ಇಂದಿನಿಂದ(ಗುರುವಾರ) ಜನವರಿ 22 ರವರೆಗೆ ನಮ್ಮ ಆಸ್ಪತ್ರೆಯಲ್ಲಿ ಎಲ್ಲಾ ಹೆರಿಗೆಯನ್ನು ಉಚಿತವಾಗಿ ಮಾಡಲಾಗುತ್ತದೆ. ಇದು ಒಂದು ದೊಡ್ಡ ಸಂದರ್ಭವಾಗಿದ್ದು, ಈ ಸಮಯದಲ್ಲಿ ನಾವು ಮಹತ್ವದ ಕೊಡುಗೆ ನೀಡಲು ನಾವು ನಿರ್ಧರಿಸಿದ್ದೇವೆ. ಐದು ದಿನಗಳ ನಿರ್ದಿಷ್ಟ ಅವಧಿಗೆ ನಮ್ಮ ಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಹೆರಿಗೆಗಳನ್ನು ಉಚಿತವಾಗಿ ಮಾಡಲಾಗುತ್ತದೆ ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

"ಇಂದು, ಇಲ್ಲಿಯವರೆಗೆ, ನಾವು ಏಳು ಹೆರಿಗೆಗಳನ್ನು ಉಚಿತವಾಗಿ ಮಾಡಿದ್ದೇವೆ" ಎಂದು ಅವರು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಯ ಈ ಕ್ರಮವನ್ನು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶ್ಲಾಘಿಸಿದ್ದಾರೆ.

ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಜನವರಿ 18, 2024 ರಿಂದ ಜನವರಿ 22, 2024 ರವರೆಗೆ ಆಸ್ಪತ್ರೆಯಲ್ಲಿ ಜನಿಸಿದ ಗಂಡು ಮಗುವನ್ನು ರಾಮನ ರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಹೊಸದಾಗಿ ಹುಟ್ಟಿದ ಹೆಣ್ಣು ಮಗುವನ್ನು ಸೀತೆಯ ರೂಪವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಹೆರಿಗೆಯನ್ನು ಉಚಿತವಾಗಿ ಮಾಡಲಾಗುತ್ತಿದೆ. ಜೈ ಶ್ರೀ ರಾಮ್," ಎಂದು ಮಾಜಿ ಕೇಂದ್ರ ಸಚಿವ ಯತ್ನಾಳ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT