ಸಾಂದರ್ಭಿಕ ಚಿತ್ರ 
ರಾಜ್ಯ

ರಾಮ ಮಂದಿರ ಉದ್ಘಾಟನೆ: ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಇಂದಿನಿಂದ 22ರ ವರೆಗೆ ಉಚಿತ ಹೆರಿಗೆ!

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.

ವಿಜಯಪುರ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಲು ವಿಜಯಪುರದ ಖಾಸಗಿ ಆಸ್ಪತ್ರೆಯೊಂದು ಜನವರಿ 18 ರಿಂದ ಜನವರಿ 22 ರವರೆಗೆ ಉಚಿತ ಹೆರಿಗೆ ಮಾಡಿಸುವುದಾಗಿ ಗುರುವಾರ ಘೋಷಿಸಿದೆ.

ವಿಜಯಪುರದಲ್ಲಿ ಜೆಎಸ್‌ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಡೆಸುತ್ತಿರುವ 'ಶ್ರೀ ಸಿದ್ದೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್' ಈ ನಿರ್ಧಾರ ಪ್ರಕಟಿಸಿದೆ.

"ಅಯೋಧ್ಯೆಯಲ್ಲಿ ಇದೇ ಸೋಮವಾರ ನಡೆಯಲಿರುವ 'ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ'ಯನ್ನು ಆಚರಿಸಲು ಇಂದಿನಿಂದ(ಗುರುವಾರ) ಜನವರಿ 22 ರವರೆಗೆ ನಮ್ಮ ಆಸ್ಪತ್ರೆಯಲ್ಲಿ ಎಲ್ಲಾ ಹೆರಿಗೆಯನ್ನು ಉಚಿತವಾಗಿ ಮಾಡಲಾಗುತ್ತದೆ. ಇದು ಒಂದು ದೊಡ್ಡ ಸಂದರ್ಭವಾಗಿದ್ದು, ಈ ಸಮಯದಲ್ಲಿ ನಾವು ಮಹತ್ವದ ಕೊಡುಗೆ ನೀಡಲು ನಾವು ನಿರ್ಧರಿಸಿದ್ದೇವೆ. ಐದು ದಿನಗಳ ನಿರ್ದಿಷ್ಟ ಅವಧಿಗೆ ನಮ್ಮ ಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಹೆರಿಗೆಗಳನ್ನು ಉಚಿತವಾಗಿ ಮಾಡಲಾಗುತ್ತದೆ ಎಂದು ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

"ಇಂದು, ಇಲ್ಲಿಯವರೆಗೆ, ನಾವು ಏಳು ಹೆರಿಗೆಗಳನ್ನು ಉಚಿತವಾಗಿ ಮಾಡಿದ್ದೇವೆ" ಎಂದು ಅವರು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಯ ಈ ಕ್ರಮವನ್ನು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶ್ಲಾಘಿಸಿದ್ದಾರೆ.

ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಜನವರಿ 18, 2024 ರಿಂದ ಜನವರಿ 22, 2024 ರವರೆಗೆ ಆಸ್ಪತ್ರೆಯಲ್ಲಿ ಜನಿಸಿದ ಗಂಡು ಮಗುವನ್ನು ರಾಮನ ರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಹೊಸದಾಗಿ ಹುಟ್ಟಿದ ಹೆಣ್ಣು ಮಗುವನ್ನು ಸೀತೆಯ ರೂಪವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಹೆರಿಗೆಯನ್ನು ಉಚಿತವಾಗಿ ಮಾಡಲಾಗುತ್ತಿದೆ. ಜೈ ಶ್ರೀ ರಾಮ್," ಎಂದು ಮಾಜಿ ಕೇಂದ್ರ ಸಚಿವ ಯತ್ನಾಳ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!