ಸೈಬರ್ ಸುರಕ್ಷತೆ ಅಭಿಯಾನದಲ್ಲಿ ಮಕ್ಕಳು 
ರಾಜ್ಯ

ತುಮಕೂರು: ಸೈಬರ್ ಸುರಕ್ಷತೆ ಅಭಿಯಾನದಲ್ಲಿ 44 ಸರ್ಕಾರಿ ಶಾಲೆಗಳು ಭಾಗಿ!

ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.

ಬೆಂಗಳೂರು: ಸೈಬರ್ ಅಪರಾಧಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲೆಯ ಗುಬ್ಬಿ ಮತ್ತು ಕೊರಟಗೆರೆ ತಾಲ್ಲೂಕಿನ 7,500 ಕ್ಕೂ ಹೆಚ್ಚು ಮಕ್ಕಳನ್ನು ಒಳಗೊಂಡಿರುವ 44 ಸರ್ಕಾರಿ ಶಾಲೆಗಳಲ್ಲಿ ಅಭಿಯಾನವನ್ನು ನಡೆಸಲಾಗುತ್ತಿದೆ. ಜನವರಿ 17 ರಂದು ಆರಂಭವಾದ ಅಭಿಯಾನ ಶುಕ್ರವಾರ ಮುಕ್ತಾಯವಾಗಲಿದೆ.

ಬೆಂಗಳೂರು ಮೂಲದ ಇಂಟರ್‌ನ್ಯಾಶನಲ್ ಸ್ಕೂಲ್ ಆಫ್ ಬ್ಯುಸಿನೆಸ್ & ರಿಸರ್ಚ್‌ನ 350 ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು LetsTagOn ಫೌಂಡೇಶನ್ ಮತ್ತು ಇಂಡಿಯಾ ಲಿಟರಸಿ ಪ್ರಾಜೆಕ್ಟ್‌ನ ಸಹಯೋಗದೊಂದಿಗೆ ಈ ಅಭಿಯಾನ ಕೈಗೊಂಡಿದ್ದಾರೆ. ಇದಕ್ಕೆ ಜಿಲ್ಲಾ  ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಕೂಡಾ ಬೆಂಬಲ ವ್ಯಕ್ತಪಡಿಸಿದೆ. 

8, 9 ಮತ್ತು 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಚಟುವಟಿಕೆ ಆಧಾರಿತ ಅವಧಿಗಳ ಮೂಲಕ ಶಿಕ್ಷಣ ನೀಡುವ ಗುರಿಯನ್ನು ಅಭಿಯಾನ ಹೊಂದಿದೆ. ಉಪನ್ಯಾಸಗಳು, ವೈಯಕ್ತಿಕ ಸುರಕ್ಷತೆ ಮತ್ತು ಸುರಕ್ಷತಾ ಅಪಾಯಗಳಿಗೆ ಸಂಭವನೀಯ ಬೆದರಿಕೆಗಳ ಮಾಹಿತಿಯನ್ನು ಒಳಗೊಂಡಿರುತ್ತದೆ. ಜೊತೆಗೆ ಅವುಗಳನ್ನು ತಡೆ ಮತ್ತು ಎದುರಿಸುವ ಕ್ರಮಗಳನ್ನು ಒಳಗೊಂಡಿರುತ್ತದೆ.

ಆಯೋಜಕರ ಪ್ರಕಾರ, ಈ ಕಾರ್ಯಕ್ರಮ 30,000 ಕ್ಕೂ ಹೆಚ್ಚು ಜನರ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ. ಏಕೆಂದರೆ ಮಕ್ಕಳು ವಿಶೇಷ ಸೆಷನ್ಸ್ ನಂತರ ತಮ್ಮ ಕುಟುಂಬ ಮತ್ತು ಸ್ನೇಹಿತರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT