ಪ್ರದರ್ಶನಕ್ಕಿಡಲಾಗಿರುವ ಅಂಚೆಚೀಟಿಗಳು 
ರಾಜ್ಯ

ಬೆಂಗಳೂರು: ಅಂಚೆ ಕಚೇರಿಯಲ್ಲಿ ರಾಮಾಯಣದ ಅಪರೂಪದ ಅಂಚೆಚೀಟಿಗಳ ಪ್ರದರ್ಶನ

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಗೆ ಪೂರ್ವಭಾವಿಯಾಗಿ ಕರ್ನಾಟಕ ಅಂಚೆ ವೃತ್ತವು ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿರುವ ಅಂಚೆ ಕಚೇರಿಯ ಪಕ್ಕದಲ್ಲಿರುವ ಸಂದೇಶ್ ಮ್ಯೂಸಿಯಂ ಆಫ್ ಕಮ್ಯುನಿಕೇಷನ್‌ನಲ್ಲಿ ‘ರಾಮಾಯಣ-ದಿ ಎಸೆನ್ಸ್ ಆಫ್ ಲೈಫ್’ ಪ್ರದರ್ಶನವನ್ನು ಏರ್ಪಡಿಸಿದೆ.

ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಗೆ ಪೂರ್ವಭಾವಿಯಾಗಿ ಕರ್ನಾಟಕ ಅಂಚೆ ವೃತ್ತವು ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿರುವ ಅಂಚೆ ಕಚೇರಿಯ ಪಕ್ಕದಲ್ಲಿರುವ ಸಂದೇಶ್ ಮ್ಯೂಸಿಯಂ ಆಫ್ ಕಮ್ಯುನಿಕೇಷನ್‌ನಲ್ಲಿ ‘ರಾಮಾಯಣ-ದಿ ಎಸೆನ್ಸ್ ಆಫ್ ಲೈಫ್’ ಪ್ರದರ್ಶನವನ್ನು ಏರ್ಪಡಿಸಿದೆ. ಇದು ಹೆಸರಾಂತ ಅಂಚೆಚೀಟಿ ಸಂಗ್ರಹಕಾರ ಮತ್ತು ಲೇಖಕಿ ಎನ್ ಶ್ರೀದೇವಿಯವರ ದಶಕಗಳ ಹಿಂದಿನ ಅಪರೂಪದ ಅಂಚೆ ಲಕೋಟೆಗಳು ಮತ್ತು ಅಂಚೆಚೀಟಿಗಳ ಸಂಗ್ರಹವನ್ನು ಪ್ರದರ್ಶಿಸುತ್ತದೆ.

66 ವರ್ಷದ ಬೆಂಗಳೂರು ಮೂಲದ ಶ್ರೀದೇವಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ, ಇಲ್ಲಿ ಪ್ರದರ್ಶಿಸಲಾದ ನನ್ನ ಸಂಗ್ರಹಣೆಯಲ್ಲಿ ಭಾರತ, ಥೈಲ್ಯಾಂಡ್, ಕಾಂಬೋಡಿಯಾ ಮತ್ತು ಇಂಡೋನೇಷ್ಯಾ, ಇತರ ಆಗ್ನೇಯ ಏಷ್ಯಾದ ರಾಷ್ಟ್ರಗಳು ಹೊರಡಿಸಿದ ರಾಮಾಯಣಕ್ಕೆ ಸಂಬಂಧಿಸಿದ ಅಂಶಗಳ ಮೇಲೆ ಅಂಚೆಚೀಟಿಗಳನ್ನು ಬಿಡುಗಡೆ ಮಾಡಲಾಗಿದೆ.

ತಮ್ಮ ಅಂಚೆಚೀಟಿ ಸಂಗ್ರಹದೊಂದಿಗೆ ಎನ್ ಶ್ರೀದೇವಿ

ನನ್ನ ಹಳೆಯ ಅಂಚೆಚೀಟಿ 1949 ರ ಹಿಂದಿನದು. ಕುವೆಂಪು ಸೇರಿದಂತೆ ವಿವಿಧ ಲೇಖಕರು ಬರೆದ ರಾಮಾಯಣದ ಹಲವು ಆವೃತ್ತಿಗಳ ಅಂಚೆಚೀಟಿಗಳು ಇಲ್ಲಿವೆ. 'ರಾಮ' ಪದವನ್ನು ಬಳಸಿ ಭಗವಾನ್ ಹನುಮಂತನ ರೇಖಾಚಿತ್ರ, 'ಕಲ್ಯಾಣ' ನಿಯತಕಾಲಿಕದ ಅನೇಕ ಚಿತ್ರಗಳ ಪ್ರದರ್ಶನಗಳು ಮತ್ತು ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಭವ್ಯವಾದ ಆಮಂತ್ರಣವನ್ನು ಸಹ ಪ್ರದರ್ಶಿಸಲಾಗುತ್ತದೆ.

ಅಂಚೆಚೀಟಿಯನ್ನು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್ ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ವಸ್ತುಸಂಗ್ರಹಾಲಯದ ಪ್ರವೇಶ ದ್ವಾರದ ತೆರೆದ ಜಾಗದಲ್ಲಿ ಇದನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಭೇಟಿ ನೀಡಬಹುದು. ಪ್ರದರ್ಶನವು ಫೆಬ್ರವರಿ 15 ರವರೆಗೆ ಇರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT