ಸಂಗ್ರಹ ಚಿತ್ರ 
ರಾಜ್ಯ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭಾಗಿ

ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಪಾಲ್ಗೊಳ್ಳಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.

ಬೆಂಗಳೂರು: ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಪಾಲ್ಗೊಳ್ಳಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.

ರಾಷ್ಟ್ರ ರಾಜಧಾನಿ ನನದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಐತಿಹಾಸಿಕ ಕ್ಷಣವಾಗಿದ್ದು, ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ ಎದುರು ನೋಡುತ್ತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾನೂ ಕಾತರದಿಂದ ಕಾಯುತ್ತಿದ್ದೇನೆ. ದೇವೇಗೌಡರಿಗೆ ಆಹ್ವಾನ ಬಂದಿದ್ದು, ಅವರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ನೀವು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ನನ್ನ ಮೇಲೆ ಒತ್ತಡವಿದೆ. ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತು ಉಭಯ ಪಕ್ಷಗಳ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT