ಜಗದೀಶ್ ಶೆಟ್ಟರ್ 
ರಾಜ್ಯ

ರಾಮಮಂದಿರ ನಿರ್ಮಾಣಕ್ಕೆ 2 ಕೋಟಿ ರೂ. ಸಂಗ್ರಹಿಸಿ ಕೊಟ್ಟೆ; ನನಗೆ ಆಹ್ವಾನ ಕೊಟ್ಟಿಲ್ಲ, ನಾನು ಹೋಗಲ್ಲ: ಜಗದೀಶ್ ಶೆಟ್ಟರ್

ರಾಮ ಮಂದಿರ ವಿಚಾರವಾಗಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿರುವ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಅವರು, ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ 2 ಕೋಟಿ ರೂಪಾಯಿ ಸಂಗ್ರಹ ಕೊಟ್ಟಿದ್ದೆ. ಆದರೆ ನನಗೆ ಆಹ್ವಾನ ಬಂದಿಲ್ಲ. ಹೀಗಾಗಿ ನಾನು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಕಲಬುರಗಿ: ರಾಮ ಮಂದಿರ ವಿಚಾರವಾಗಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿರುವ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಅವರು, ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ 2 ಕೋಟಿ ರೂಪಾಯಿ ಸಂಗ್ರಹ ಕೊಟ್ಟಿದ್ದೆ. ಆದರೆ ನನಗೆ ಆಹ್ವಾನ ಬಂದಿಲ್ಲ. ಹೀಗಾಗಿ ನಾನು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಿರುವುದು ಬಹಳ ಖುಷಿ ತಂದಿದೆ. ಆದರೆ ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿಲ್ಲ. ಹೀಗಾಗಿ ನಾನು ಅಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದರು. 

ನಾನು ರಾಮ ಭಕ್ತ. ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸಲು ಹೇಳಿದಾಗ 2 ಕೋಟಿ ರೂಪಾಯಿ ಸಂಗ್ರಹಿಸಿ ಕೊಟ್ಟಿದ್ದೆ. ಆದರೆ ನನಗೆ ಆಹ್ವಾನ ಕೊಟ್ಟಿಲ್ಲ. ಹೀಗಾಗಿ ಜನವರಿ 22ರ ನಂತರ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆಯುತ್ತೇನೆ ಎಂದು ಹೇಳಿದರು.

ರಾಮ ಮಂದಿರ ಅನ್ನುವುದು ಧಾರ್ಮಿಕತೆ,  ಧರ್ಮದ ಸಂಕೇತ, ಧರ್ಮ ಜಾಗೃತಿ ಮಾಡಲು, ದೇಶವನ್ನು ಒಂದು ಮಾಡಲು ಇರುವಂಥದ್ದು, ಹೀಗಾಗಿ ರಾಮ ಮಂದಿರದ ವಿಚಾರದಲ್ಲಿ ರಾಜಕಾರಣ ಮಾಡಬಾರದು. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಬರಬಾರದು. ಆಹ್ವಾನ ಬಂದಿರುವವರು ಅಯೋಧ್ಯೆಗೆ ಹೋಗುವುದು ಬಿಡುವುದು ಅವರವರ ಇಷ್ಟ. ಆದರೆ ನನಗೆ ವೈಯಕ್ತಿಕವಾಗಿ ಆಹ್ವಾನ ಬಂದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಹಿಂದೂ ವಿರೋಧಿ ಅಲ್ಲ, ಹಿಂದೂ ವಿರೋಧಿ ಇದ್ದರೆ ರಾಜ್ಯದಲ್ಲಿ 135 ಸ್ಥಾನ ಹೇಗೆ ಬರುತ್ತಿತ್ತು? ಬಿಜೆಪಿಯಿಂದ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ, ನಾನು ವಾಪಸ್ ಬಿಜೆಪಿಗೆ ಹೋಗುವ ಪ್ರಶ್ನೆಯೆ ಇಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT