ಸಾಂದರ್ಭಿಕ ಚಿತ್ರ 
ರಾಜ್ಯ

ಇನ್ನು ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ 'ಹಕ್ಕಿ ಹಬ್ಬ' ಆಯೋಜನೆಗೆ ಕೆಇಡಿಬಿ ನಿರ್ಧಾರ!

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು (ಕೆಇಡಿಬಿ)  ಇನ್ನು ಮುಂದೆ  ಪ್ರತಿ ಮೂರು ತಿಂಗಳಿಗೊಮ್ಮೆ ಹಕ್ಕಿ ಹಬ್ಬ ಆಯೋಜಿಸಲು ನಿರ್ಧರಿಸಿದೆ. ಈ ಹಕ್ಕಿ ಹಬ್ಬದಲ್ಲಿ ಆಯ್ದ ಪಕ್ಷಿಗಳನ್ನು ನೋಡಬಹುದು. ವಿವಿಧ ಪ್ರಬೇಧಗಳಿಗೆ ಹೆಸರುವಾಸಿಯಾದ ವಿಶಿಷ್ಟ ಸ್ಥಳದಲ್ಲಿ ಈ ಹಬ್ಬವನ್ನು ನಡೆಸಲಾಗುತ್ತದೆ.

ಬೆಂಗಳೂರು: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು (ಕೆಇಡಿಬಿ)  ಇನ್ನು ಮುಂದೆ  ಪ್ರತಿ ಮೂರು ತಿಂಗಳಿಗೊಮ್ಮೆ ಹಕ್ಕಿ ಹಬ್ಬ ಆಯೋಜಿಸಲು ನಿರ್ಧರಿಸಿದೆ. ಹಿನ್ನೀರು ಪ್ರದೇಶದಲ್ಲಿ ಹಕ್ಕಿಗಳ ಹಬ್ಬ ನಡೆಯಲಿದ್ದು, ಸಂಶೋಧಕರು, ವನ್ಯಜೀವಿ ಛಾಯಾಗ್ರಾಹಕರು, ಪಕ್ಷಿವೀಕ್ಷಕರು ಈ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ವರ್ಷ ಬಾಗಲಕೋಟೆಯ ಆಲಮಟ್ಟಿ  ಹಿನ್ನೀರಿನಲ್ಲಿ ಜನವರಿ 26-28 ರವರೆಗೆ ನಡೆಯಲಿದೆ. ಈ ಬಾರಿ ಫ್ಲೆಮಿಂಗೊಗಳು ವಿಶೇಷ ಆಕರ್ಷಣೆಯಾಗಿವೆ. ಏಪ್ರಿಲ್-ಮೇನಲ್ಲಿ ಲೋಕಸಭಾ ಚುನಾವಣೆಯ ನಂತರ ಹಕ್ಕಿ ಹಬ್ಬದ ಮುಂದಿನ ಆವೃತ್ತಿ  ನಡೆಯಲಿದೆ. ಪ್ರವಾಸಿಗರಿಗೆ ವಿವಿಧ ಜಾತಿಯ ಪಕ್ಷಿಗಳ ಬಗ್ಗೆ ಮತ್ತು ಪಕ್ಷಿಗಳ ಪ್ರಾಮುಖ್ಯತೆ ಮತ್ತು ಪ್ರಕೃತಿ ಸಂರಕ್ಷಣೆಯ ಬಗ್ಗೆ ಕಲ್ಪನೆಯನ್ನು ನೀಡುವುದು ಹಬ್ಬದ ಕಲ್ಪನೆಯಾಗಿದೆ.

ಕರ್ನಾಟಕ ಅರಣ್ಯ ಇಲಾಖೆ, ಜಂಗಲ್ ಲಾಡ್ಜ್‌, ರೆಸಾರ್ಟ್‌ಗಳು ಮತ್ತು ಕೆಇಡಿಬಿ ಈ ಉತ್ಸವವನ್ನು ಆಯೋಜಿಸಿದೆ. ಮಾಸಾಂತ್ಯಕ್ಕೆ ನಿರೀಕ್ಷಿತ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಿಗಳು ಸೇರುವ ಕಾರಣ ಮಾಮೂಲಿ ಪದ್ಧತಿಯಂತೆ ಈ ತಿಂಗಳ ಆರಂಭದ ಬದಲು ಈ ತಿಂಗಳಾಂತ್ಯಕ್ಕೆ ಉತ್ಸವ ನಡೆಸಲಾಗುತ್ತಿದೆ. ಆಲಮಟ್ಟಿ ಹಿನ್ನೀರು ಮತ್ತು ಅಣೆಕಟ್ಟು ಸ್ಥಳೀಯ ಮತ್ತು ವಲಸೆ ಹಕ್ಕಿಗಳಿಗೆ ಸೂಕ್ತ ಸ್ಥಳವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಈ ಸ್ಥಳವು ಕೊಕ್ಕೆರೆ ಬೆಳ್ಳೂರು, ರಂಗತಿಟ್ಟು ಅಥವಾ ಇತರ ಸ್ಥಳಗಳಂತೆಯೇ ವಲಸೆ ಹಕ್ಕಿಗಳ ಪ್ರಮುಖ ತಾಣವಾಗಿದೆ.ಆದರೆ ಇಲ್ಲಿಯವರೆಗೆ ಇಲ್ಲಿ ಉತ್ಸವ ನಡೆಯದ ಕಾರಣ ಈ ಬಾರಿ ಬಾಗಲಕೋಟೆಯನ್ನು ಆಯ್ಕೆ ಮಾಡಲಾಗಿದೆ’ ಎಂದು ಕೆಇಡಿಬಿಯ ಅಧಿಕಾರಿಯೊಬ್ಬರು ತಿಳಿಸಿದರು.

ಪೆಲಿಕನ್, ಕೊಕ್ಕರೆಗಳು ಮತ್ತು ವೈವಿಧ್ಯಮಯ ಜಲಪಕ್ಷಿಗಳನ್ನು ಇಲ್ಲಿ ನೋಡಬಹುದು  ಈ ಬಾರಿ ಪಕ್ಷಿ ಉತ್ಸವಕ್ಕೆ ಗ್ರೇಟರ್ ಫ್ಲೆಮಿಂಗೊವನ್ನು ಲಾಂಛನವಾಗಿ ಆಯ್ಕೆ ಮಾಡಲಾಗಿದೆ ಎಂದು  ಅರಣ್ಯ, ವನ್ಯಜೀವಿಗಳ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ (ಕೆಇಡಿಬಿ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಪುಷ್ಕರ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು:

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT