ಸಾಂದರ್ಭಿಕ ಚಿತ್ರ 
ರಾಜ್ಯ

ಮರಳು ಮಾಫಿಯಾಕ್ಕೆ ನೆರವು ನೀಡಿದ ಆರೋಪ: ಕಂಕನಾಡಿ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಮರಳು ಮಾಫಿಯಾಕ್ಕೆ ಅಕ್ರಮದಲ್ಲಿ ನೆರವು ನೀಡಿದ ಆರೋಪದ ಮೇಲೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ.

ಮಂಗಳೂರು: ಮರಳು ಮಾಫಿಯಾಕ್ಕೆ ಅಕ್ರಮದಲ್ಲಿ ನೆರವು ನೀಡಿದ ಆರೋಪದ ಮೇಲೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ.

ಅಕ್ರಮ ಮರಳು ದಂಧೆ ವಿರುದ್ಧ ಕ್ರಮಕೈಗೊಳ್ಳಲು ಮೇಲಧಿಕಾರಿಗಳ ಸೂಚನೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಎಸಿಪಿ ಧನ್ಯ ನಾಯಕ್‌ ವರದಿ ನೀಡಿದ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಇನ್‌ಸ್ಪೆಕ್ಟರ್‌ ಎಚ್‌ಎಸ್‌ ಭಜಂತ್ರಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜೆಪ್ಪಿನಮೊಗರು ಕಡೆಕಾರು ಎಂಬಲ್ಲಿ ಅಕ್ರಮ ಮರಳು ತೆಗೆಯುವ ಸ್ಥಳದ ಮೇಲೆ ದಾಳಿ ನಡೆಸುವಂತೆ ಉನ್ನತ ಅಧಿಕಾರಿಗಳ ಸೂಚನೆಯನ್ನು ಭಜಂತ್ರಿ ನಿರ್ಲಕ್ಷಿಸಿದ್ದಾರೆ ಎಂದು ವರದಿಯಾಗಿತ್ತು. ದೂರುಗಳೊಂದಿಗೆ ಠಾಣೆಗೆ ಭೇಟಿ ನೀಡುವ ಜನರೊಂದಿಗೆ ಇನ್ಸ್‌ಪೆಕ್ಟರ್ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಧ್ಯಕ್ಷ ಅಲ್ ನಹ್ಯಾನ್ ರ ಅಚ್ಚರಿಯ 'ಭಾರತ ಭೇಟಿ' ಬಳಿಕ ಪಾಕ್ ಏರ್‌ಪೋರ್ಟ್ ಒಪ್ಪಂದದಿಂದ ಹಿಂದೆ ಸರಿದ UAE!

ಇತಿಹಾಸದ ಅತಿ ದೊಡ್ಡ ಕಾರ್ಯಚರಣೆ, ಗಣರಾಜ್ಯೋತ್ಸವ ದಿನ ತಪ್ಪಿಗ ಭಾರಿ ಅನಾಹುತ; 10 ಸಾವಿರ ಕೆಜಿ ಸ್ಫೋಟಕ ವಶಕ್ಕೆ!

ರಷ್ಯಾದ ತೈಲದಿಂದ ದೂರ ಉಳಿದ ರಿಲಾಯನ್ಸ್!

'ಡ್ರ್ಯಾಗನ್ , ಆನೆ ಜೊತೆಯಾಗಿ ಹೆಜ್ಜೆ ಹಾಕಬೇಕು: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್!

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

SCROLL FOR NEXT