ರಾಜ್ಯ

ಮೈಸೂರು: ರಾಮ ಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಸಂಸದ ಪ್ರತಾಪ್ ಸಿಂಹ!

Nagaraja AB

ಮೈಸೂರು : ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹ ಕೆತ್ತನೆ ಮಾಡಿರುವ ಮೈಸೂರಿನ ಅರುಣ್ ಯೋಗಿ ರಾಜ್ ಕುಟುಂಬದವರಿಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಶ್ರೀವತ್ಸ ಅವರ ನೇತೃತ್ವದ ತಂಡ ಸನ್ಮಾನಿಸಿ ಗೌರವಿಸಿದ್ದಾರೆ. ಇಂದು ಮಧ್ಯಾಹ್ನ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಸಹೋದರ ಸೂರ್ಯ ಪ್ರಕಾಶ್ ಹಾಗೂ ಪತ್ನಿ ವಿಜೇತ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಅಯೋಧ್ಯೆಗೆ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೂ ಮೈಸೂರಿಗೆ ಅವಿನಾಭವ ಸಂಬಂಧ ಉಂಟಾಗಿದೆ. ರಾಮಲಲ್ಲಾ ವಿಗ್ರಹದ ಕಲ್ಲು ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗುಜ್ಜೆಗೌಡನಹುಂಡಿಯ ಹಿಂದುಳಿದ ವರ್ಗದ ಸಮುದಾಯದ ರಾಮದಾಸ್ ಎಂಬುವವರ ಜಮೀನಿನದ್ದಾಗಿದೆ. ಕೆತ್ತನೆ ಕಾರ್ಯ ಸಹ ಮೈಸೂರಿನ ಅರುಣ್ ಯೋಗಿರಾಜ್ ರವರದ್ದಾಗಿದೆ, ಮುಂದಿನ ಹಲವಾರು ಶತಮಾನಗಳ ವರೆಗೂ ಸಹ ಇವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಲಿದೆ ಎಂದರು. 

ಇದೇ 22 ರಂದು ದೇಶಾದ್ಯಂತ ಎಲ್ಲಾ ಮಂದಿರಗಳಲ್ಲಿ ಪೂಜೆ ಪುನಸ್ಕಾರಗಳು ನೆರೆವೇರುವ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾನದ ಮುಖಾಂತರ ಶ್ರೀರಾಮ ಮಂದಿರ ಉದ್ಘಾಟನೆಗೊಂಡು ಕೋಟ್ಯಂತರ ಜನರ ಕನಸು ನನಸಾಗುವ ಕ್ಷಣಗಣನೆ ಆರಂಭವಾಗಿದೆ ಎಂದು ತಿಳಿಸಿದರು. ಈ ವೇಳೆ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹಾಗೂ ಹಲವಾರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.
 

SCROLL FOR NEXT