ಅರುಣ್ ಯೋಗಿರಾಜ್ ಕುಟುಂಬಸ್ಥರಿಗೆ ಸನ್ಮಾನದ ಚಿತ್ರ 
ರಾಜ್ಯ

ಮೈಸೂರು: ರಾಮ ಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಸಂಸದ ಪ್ರತಾಪ್ ಸಿಂಹ!

ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹ ಕೆತ್ತನೆ ಮಾಡಿರುವ ಮೈಸೂರಿನ ಅರುಣ್ ಯೋಗಿ ರಾಜ್ ಕುಟುಂಬದವರಿಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಶ್ರೀವತ್ಸ ಅವರ ನೇತೃತ್ವದ ತಂಡ ಸನ್ಮಾನಿಸಿ ಗೌರವಿಸಿದ್ದಾರೆ.

ಮೈಸೂರು : ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹ ಕೆತ್ತನೆ ಮಾಡಿರುವ ಮೈಸೂರಿನ ಅರುಣ್ ಯೋಗಿ ರಾಜ್ ಕುಟುಂಬದವರಿಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಶ್ರೀವತ್ಸ ಅವರ ನೇತೃತ್ವದ ತಂಡ ಸನ್ಮಾನಿಸಿ ಗೌರವಿಸಿದ್ದಾರೆ. ಇಂದು ಮಧ್ಯಾಹ್ನ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಸಹೋದರ ಸೂರ್ಯ ಪ್ರಕಾಶ್ ಹಾಗೂ ಪತ್ನಿ ವಿಜೇತ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಅಯೋಧ್ಯೆಗೆ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೂ ಮೈಸೂರಿಗೆ ಅವಿನಾಭವ ಸಂಬಂಧ ಉಂಟಾಗಿದೆ. ರಾಮಲಲ್ಲಾ ವಿಗ್ರಹದ ಕಲ್ಲು ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗುಜ್ಜೆಗೌಡನಹುಂಡಿಯ ಹಿಂದುಳಿದ ವರ್ಗದ ಸಮುದಾಯದ ರಾಮದಾಸ್ ಎಂಬುವವರ ಜಮೀನಿನದ್ದಾಗಿದೆ. ಕೆತ್ತನೆ ಕಾರ್ಯ ಸಹ ಮೈಸೂರಿನ ಅರುಣ್ ಯೋಗಿರಾಜ್ ರವರದ್ದಾಗಿದೆ, ಮುಂದಿನ ಹಲವಾರು ಶತಮಾನಗಳ ವರೆಗೂ ಸಹ ಇವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಲಿದೆ ಎಂದರು. 

ಇದೇ 22 ರಂದು ದೇಶಾದ್ಯಂತ ಎಲ್ಲಾ ಮಂದಿರಗಳಲ್ಲಿ ಪೂಜೆ ಪುನಸ್ಕಾರಗಳು ನೆರೆವೇರುವ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾನದ ಮುಖಾಂತರ ಶ್ರೀರಾಮ ಮಂದಿರ ಉದ್ಘಾಟನೆಗೊಂಡು ಕೋಟ್ಯಂತರ ಜನರ ಕನಸು ನನಸಾಗುವ ಕ್ಷಣಗಣನೆ ಆರಂಭವಾಗಿದೆ ಎಂದು ತಿಳಿಸಿದರು. ಈ ವೇಳೆ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹಾಗೂ ಹಲವಾರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT