ಸಿಎಂ ಸಿದ್ದರಾಮಯ್ಯ 
ರಾಜ್ಯ

ಒಳ ಮೀಸಲಾತಿ ಪರಿಶೀಲನೆಗೆ ಸಮಿತಿ ರಚಿಸಿದ ಕೇಂದ್ರ; ದಲಿತರ ದಾರಿ ತಪ್ಪಿಸುವ ಕುತಂತ್ರ ಎಂದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಇದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ...

ಬೆಂಗಳೂರು: ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಇದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು "ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ". ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದಿದ್ದಾರೆ.

ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘‘ಸಮಯ ಕೊಲ್ಲುವ’’ ತಂತ್ರ ಅಷ್ಟೇ ಆಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ 
ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯವೇ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT