ಮಾಜಿ ಸಿಎಂ ಬೊಮ್ಮಾಯಿ 
ರಾಜ್ಯ

ರಾಮರಾಜ್ಯಕ್ಕೆ ಅಯೋಧ್ಯೆ ರಾಮಮಂದಿರ ಅಡಿಪಾಯ: ಮಾಜಿ ಸಿಎಂ ಬೊಮ್ಮಾಯಿ

ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮೂಲಕ ರಾಮ ರಾಜ್ಯಕ್ಕೆ ಅಡಿಗಲ್ಲು ಹಾಕಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮೂಲಕ ರಾಮ ರಾಜ್ಯಕ್ಕೆ ಅಡಿಗಲ್ಲು ಹಾಕಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದರು.

ಸಂಗೀತ ನಿರ್ದೇಶಕಿ ಜಯಶ್ರೀ ಅರವಿಂದ ಅವರು ಶ್ರೀರಾಮನ ಕುರಿತ ಹಾಡುಗಳಿಗೆ ಸಂಗಿತ ಸಂಯೋಜನೆ ಮಾಡಿರುವ ಧ್ವನಿ ಸುರುಳಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ರಾಮ ರಾಜ್ಯ ಎಂದರೆ ಎಲ್ಲರಿಗೂ ಸಮಾನ ಅವಕಾಶ, ಸಮೃದ್ಧಿ, ಬಡತನ ಎಲ್ಲಿಯೂ ಕಾಣದಂತಾಗುವುದು, ಅನ್ಯಾಯ ತಡೆಯುವುದು, ಎಲ್ಲರಿಗೂ ನ್ಯಾಯ ಸಿಗುವಂತೆ ಮಾಡುವುದೇ ಮೋದಿ ಅವರ ರಾಮರಾಜ್ಯದ ಕನಸು ಎಂದು ಹೇಳಿದರು.

500 ವರ್ಷಗಳಿಗೂ ಹೆಚ್ಚು ಕಾಲ ಅಯೋಧ್ಯೆಯ ಜನ್ಮ ಸ್ಥಳದಿಂದ ರಾಮನನ್ನು ದೂರ ಇಡಲಾಗಿತ್ತು. ರಾಮನ ಜನ್ಮಸ್ಥಳದಲ್ಲಿ ಬಾಬ್ರಿ ಮಸೀದಿ ಇದ್ದ ಕಾರಣ ಅಲ್ಲಿ ಪೂಜೆ ಸಲ್ಲಿಸಲು ಆಗಿರಲಿಲ್ಲ. ಜ.22ಕ್ಕೆ ಮತ್ತೆ ರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತದೆ. ನರೇಂದ್ರ ಮೋದಿಯವರಿಂದಲೇ ತ್ರೇತಾಯುಗದ ರಾಮನ ಪ್ರತಿಷ್ಠಾಪನೆ ಆಗಬೇಕು ಎಂದು ಮೊದಲೇ ತೀರ್ಮಾನ ಆಗಿತ್ತು ಎನಿಸುತ್ತದೆ. ನಾವೆಲ್ಲರೂ ಅದೃಷ್ಟವಂತರು, ರಾಮರಾಜ್ಯ ಸ್ಥಾಪನೆಯಿಂದಾಗಿ ಎಲ್ಲರೂ ಸಂತೋಷದಿಂದ ಬದುಕಲಿ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!