ಸಂಗ್ರಹ ಚಿತ್ರ 
ರಾಜ್ಯ

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರ್ಧ ದಿನ ರಜೆಗೆ ಸಿಎಂ ಸಿದ್ದರಾಮಯ್ಯಗೆ ಎಎಬಿ ಮನವಿ

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ರಾಜ್ಯದ ಜನರು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮ ವೀಕ್ಷಿಸಲು ಕಾತರರಾಗಿದ್ದಾರೆ. ಕೇಂದ್ರ ಸರ್ಕಾರವು ಇದಾಗಲೇ ಜನವರಿ 22ರಂದು ಅರ್ಧ ದಿನ ರಜೆ ಘೋಷಣೆ ಮಾಡಿದೆ. ಈ ನೆಲೆಯಲ್ಲಿ ತಾವೂ ಸಹ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕೋರಲಾಗಿದೆ.

ತನ್ನ ಆದರ್ಶಯುತ ಬದುಕಿನ ಮೂಲಕ ಭಾರತ ಸಮಾಜವನ್ನು ಪ್ರಭಾವಿಸಿರುವ ರಾಮದೇವರ ಪ್ರಭಾವಕ್ಕೆ ರಾಜ್ಯದ ಬಹುತೇಕ ಜನರು ಒಳಗಾಗಿದ್ದಾರೆ ಎಂದು ಎಎಬಿ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT