ರಾಜ್ಯ

ತಾತಾ, ಅಜ್ಜಿಯೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಹೊರಟ ನಿಖಿಲ್ ಕುಮಾರಸ್ವಾಮಿ!

Nagaraja AB

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾತಾ, ಅಜ್ಜಿಯೊಂದಿಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು  ಪ್ರಯಾಣ ಬೆಳೆಸಿದರು.

ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನಿತರಲ್ಲಿ ನಿಖಿಲ್‌ ಕುಮಾರಸ್ವಾಮಿ ಕೂಡ ಒಬ್ಬರಾಗಿದ್ದಾರೆ. 

ಜನವರಿ 22  ನಟ ನಿಖಿಲ್‌ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ. ಆದರೆ, ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿಲ್ಲ.ಇದಕ್ಕಾಗಿ ಕ್ಷಮೆ ಇರಲಿ  ಎಂದು ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
 

SCROLL FOR NEXT