ಸಿ.ಎಂ.ಇಬ್ರಾಹಿಂ 
ರಾಜ್ಯ

ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ಸಿ.ಎಂ.ಇಬ್ರಾಹಿಂಗೆ ಕೋರ್ಟ್ ಶಾಕ್!

ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ನ್ಯಾಯಾಲಯ ಶಾಕ್ ನೀಡಿದ್ದು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ನ್ಯಾಯಾಲಯ ಶಾಕ್ ನೀಡಿದ್ದು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಸಿಎಂ ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ದೇವೇಗೌಡ ಕುಟುಂಬದ ವಿರುದ್ಧವೇ ತೊಡೆ ತಟ್ಟಿದ್ದ ಸಿಎಂ ಇಬ್ರಾಹಿಂ ಅವರಿಗೆ ಈ ಮೂಲಕ ಹಿನ್ನಡೆಯಾಗಿದೆ.

ಇತ್ತೀಚೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದಿದ್ದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ, ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದರೆ ಜೆಡಿಎಸ್‍ನಿಂದ ಉಚ್ಚಾಟನೆ ಮಾಡಲಾಗಿದ್ದರೂ, ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿಹ್ನೆ ಬಳಸುತ್ತಿದ್ದರು.

ಇದೀಗ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಆದೇಶ ನೀಡುವುದರ ಜೊತೆಗೆ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ” ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇದರ ವಿರುದ್ಧ ಪಕ್ಷದ ಅಧ್ಯಕ್ಷರಾಗಿದ್ದ ಸಿ ಎಂ ಇಬ್ರಾಹಿಂ ಬಂಡಾಯವೆದ್ದಿದ್ದರು. ಬಳಿಕ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಉಚ್ಚಾಟನೆಯ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸಿಎಂ ಇಬ್ರಾಹಿಂ, ಎಚ್​​.ಡಿ.ದೇವೇಗೌಡ, ಎಚ್.ಡಿ ಕುಮಾರಸ್ವಾಮಿ ಅವರನ್ನ ಪ್ರತಿವಾದಿಯಾಗಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷ ನೇಮಕ ಕಾನೂನು ಬಾಹಿರವಾಗಿದ್ದು, ಅನೂರ್ಜಿತಗೊಳಿಸಿ ಅಂತ ಮನವಿ ಮಾಡಿದ್ದರು.

ಹೆಚ್ ​​​ಡಿ ದೇವೇಗೌಡರಿಗೆ ಪರ್ಯಾಯವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ‌.ಕೆ ನಾಣು ಅವರನ್ನು ಸಿ ಎಂ ಇಬ್ರಾಹೀಂ ಆಯ್ಕೆ ಮಾಡಿದ್ದರು. ಅಲ್ಲದೇ, ತೆನೆ ಹೊತ್ತ ಮಹಿಳೆ ಗುರುತು ನಮಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಕೂಡ ಬರೆಯಲಾಗಿದೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT