ಸಿ.ಎಂ.ಇಬ್ರಾಹಿಂ 
ರಾಜ್ಯ

ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ಸಿ.ಎಂ.ಇಬ್ರಾಹಿಂಗೆ ಕೋರ್ಟ್ ಶಾಕ್!

ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ನ್ಯಾಯಾಲಯ ಶಾಕ್ ನೀಡಿದ್ದು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ನ್ಯಾಯಾಲಯ ಶಾಕ್ ನೀಡಿದ್ದು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಸಿಎಂ ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ದೇವೇಗೌಡ ಕುಟುಂಬದ ವಿರುದ್ಧವೇ ತೊಡೆ ತಟ್ಟಿದ್ದ ಸಿಎಂ ಇಬ್ರಾಹಿಂ ಅವರಿಗೆ ಈ ಮೂಲಕ ಹಿನ್ನಡೆಯಾಗಿದೆ.

ಇತ್ತೀಚೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದಿದ್ದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ, ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದರೆ ಜೆಡಿಎಸ್‍ನಿಂದ ಉಚ್ಚಾಟನೆ ಮಾಡಲಾಗಿದ್ದರೂ, ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿಹ್ನೆ ಬಳಸುತ್ತಿದ್ದರು.

ಇದೀಗ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಆದೇಶ ನೀಡುವುದರ ಜೊತೆಗೆ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ” ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇದರ ವಿರುದ್ಧ ಪಕ್ಷದ ಅಧ್ಯಕ್ಷರಾಗಿದ್ದ ಸಿ ಎಂ ಇಬ್ರಾಹಿಂ ಬಂಡಾಯವೆದ್ದಿದ್ದರು. ಬಳಿಕ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಉಚ್ಚಾಟನೆಯ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸಿಎಂ ಇಬ್ರಾಹಿಂ, ಎಚ್​​.ಡಿ.ದೇವೇಗೌಡ, ಎಚ್.ಡಿ ಕುಮಾರಸ್ವಾಮಿ ಅವರನ್ನ ಪ್ರತಿವಾದಿಯಾಗಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷ ನೇಮಕ ಕಾನೂನು ಬಾಹಿರವಾಗಿದ್ದು, ಅನೂರ್ಜಿತಗೊಳಿಸಿ ಅಂತ ಮನವಿ ಮಾಡಿದ್ದರು.

ಹೆಚ್ ​​​ಡಿ ದೇವೇಗೌಡರಿಗೆ ಪರ್ಯಾಯವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ‌.ಕೆ ನಾಣು ಅವರನ್ನು ಸಿ ಎಂ ಇಬ್ರಾಹೀಂ ಆಯ್ಕೆ ಮಾಡಿದ್ದರು. ಅಲ್ಲದೇ, ತೆನೆ ಹೊತ್ತ ಮಹಿಳೆ ಗುರುತು ನಮಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಕೂಡ ಬರೆಯಲಾಗಿದೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT