ಸಂಗ್ರಹ ಚಿತ್ರ 
ರಾಜ್ಯ

ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ಕರ್ನಾಟಕದ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ!

ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿರುವ ರಾಮಲಲ್ಲನ ವಿಗ್ರಹವನ್ನು ಕೆತ್ತಲು ಮೈಸೂರು ಸಮೀಪದ ಗುಜ್ಜೇಗೌಡನಪುರ ಗ್ರಾಮದ ತಮ್ಮ ಜಮೀನಿನಲ್ಲಿ ಸಿಕ್ಕ ಕಲ್ಲು ಬಳಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ಮೈಸೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿರುವ ರಾಮಲಲ್ಲನ ವಿಗ್ರಹವನ್ನು ಕೆತ್ತಲು ಮೈಸೂರು ಸಮೀಪದ ಗುಜ್ಜೇಗೌಡನಪುರ ಗ್ರಾಮದ ತಮ್ಮ ಜಮೀನಿನಲ್ಲಿ ಸಿಕ್ಕ ಕಲ್ಲು ಬಳಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ದಲಿತ ರೈತ ರಾಮದಾಸ್, ರಾಮ ಮಂದಿರ ನಿರ್ಮಾಣಕ್ಕೆ ತಮ್ಮ ಆಸ್ತಿಯ ಭಾಗವನ್ನು ದಾನ ಮಾಡಲು ನಿರ್ಧರಿಸಿದ್ದಾರೆ.

ಗುಜ್ಜೇಗೌಡನಪುರದ ಜನರಿಗೆ ತಮ್ಮ ಗ್ರಾಮದಿಂದ ಕಲ್ಲು ಬಂಡೆಯಿಂದ ವಿಗ್ರಹವನ್ನು ಕೆತ್ತಿರುವುದು ಸಂತಸ ತಂದಿದೆ ಎಂದು ರಾಮದಾಸ್ ಹೇಳಿದರು.

ನನ್ನ 2.14 ಎಕರೆ ಭೂಮಿಯಲ್ಲಿನ ಬಂಡೆಗಳನ್ನು ಕೃಷಿಗಾಗಿ ತೆರವುಗೊಳಿಸಲು ನಾನು ಬಯಸಿದ್ದೆ. ಉತ್ಖನನ ಮಾಡಿದ ಬಂಡೆಗಳು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅವಶ್ಯಕತೆಗೆ ಸರಿಹೊಂದುತ್ತವೆ. ಹೀಗಾಗಿ ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವುಗಳಲ್ಲಿ ಒಂದನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದರು.

ನನ್ನ ಜಮೀನಿನಲ್ಲಿ ಸಿಕ್ಕ ಕಲ್ಲಿನಿಂದ ಇಂದು ರಾಮಲಲ್ಲಾ ಉದ್ಭವಿಸಿದ್ದಾನೆ. ಹೀಗಾಗಿ ಗ್ರಾಮದ ಅನೇಕರು ನನ್ನ ಭೂಮಿಯಲ್ಲಿ ರಾಮ ಮಂದಿರವನ್ನು ನೋಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದು ನಾನು ಅದರ ಭಾಗವನ್ನು ದಾನ ಮಾಡಲು ನಿರ್ಧರಿಸಿದೆ ಎಂದು ರಾಮದಾಸ್ ಹೇಳಿದರು.

ರಾಮಲಲ್ಲಾ ವಿಗ್ರಹವನ್ನು ಕೆತ್ತಲು ಕಲ್ಲಿನ ಬ್ಲಾಕ್‌ಗಾಗಿ ಮನ್ನಯ್ಯ ಬಡಿಗರು, ನರೇಂದ್ರ ಶಿಲ್ಪಿ ಮತ್ತು ಗೋಪಾಲ್ ಅವರು ನನ್ನನ್ನು ಸಂಪರ್ಕಿಸಿದರು. ನಮ್ಮಲ್ಲಿ 10 ಅಡಿ ಅಳತೆಯ ಮೂರು ಬೃಹತ್ ಕಲ್ಲುಗಳಿವೆ ಎಂದು ನಾನು ಅವರಿಗೆ ಹೇಳಿದಾಗ ಅವರು ನನ್ನ ಭೂಮಿಗೆ ಭೇಟಿ ನೀಡಿದರು. ಅವುಗಳಲ್ಲಿ ಒಂದನ್ನು ತಜ್ಞರ ಪರೀಕ್ಷೆಗಾಗಿ ಅಯೋಧ್ಯೆಗೆ ಕೊಂಡೊಯ್ದರು. ಟ್ರಸ್ಟ್ ಕಲ್ಲಿನ ಬ್ಲಾಕ್ ಅನ್ನು ಆಯ್ಕೆ ಮಾಡಿದೆ ಎಂದು ಅವರು ಹೇಳಿದಾಗ ನಮಗೆ ಸಂತೋಷವಾಯಿತು ಎಂದು ರಾಮದಾಸ್ ಹೇಳಿದರು.

ಶೀಘ್ರದಲ್ಲೇ, ಭರತ, ಲಕ್ಷ್ಮಣ ಮತ್ತು ಶತ್ರುಘ್ನ ವಿಗ್ರಹಗಳನ್ನು ಕೆತ್ತಲು ಇನ್ನೂ ನಾಲ್ಕು ಬ್ಲಾಕ್‌ಗಳಿಗೆ ಆದೇಶವನ್ನು ಒಂದು ತಿಂಗಳಲ್ಲಿ ತಲುಪಿಸಲಾಗಿದೆ ಎಂದು ಅವರು ಹೇಳಿದರು.

ಇದೇ ವೇಳೆ ಜನವರಿ 22ರಂದು ಬೆಳಗ್ಗೆ 6 ರಿಂದ 8 ಗಂಟೆಯವರೆಗೆ ರಾಮದಾಸ್ ಅವರು ದಾನ ಮಾಡಲಿರುವ ಜಮೀನಿನಲ್ಲಿ ರಾಮಭಕ್ತರು ಹಾಗೂ ಗ್ರಾಮಸ್ಥರು ದೇಗುಲ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಟಿ ದೇವೇಗೌಡ ತಿಳಿಸಿದರು. ಆ ವಿಶೇಷ ಸಂದರ್ಭಕ್ಕಾಗಿ ಗುಜ್ಜೇಗೌಡನಪುರವನ್ನು ಅಲಂಕರಿಸಲಾಗುವುದು ಎಂದರು.

ರಾಮದಾಸ್ ಅವರ ಜಮೀನಿನಲ್ಲಿ ಅಗೆದಿರುವ ಕಲ್ಲಿನ ಬಂಡೆಯನ್ನು ಬಳಸಿ ನಿರ್ಮಿಸುವ ದೇವಾಲಯಕ್ಕಾಗಿ ರಾಮನ ವಿಗ್ರಹವನ್ನು ಕೆತ್ತಲು ಗ್ರಾಮಸ್ಥರೊಂದಿಗೆ ಯೋಗಿರಾಜ್ ಅವರನ್ನು ಸಂಪರ್ಕಿಸುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ