ಸಂಗ್ರಹ ಚಿತ್ರ 
ರಾಜ್ಯ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಬಿಜೆಪಿಯಿಂದ 'ನನ್ನ ರಾಮ' ಅಭಿಯಾನ ಆರಂಭ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲ ಪಕ್ಷದ ಕಾರ್ಯಕರ್ತರು ಹಾಗೂ ಜನರನ್ನು ಹುರಿದುಂಬಿಸಲು ರಾಜ್ಯ ಬಿಜೆಪಿ ನನ್ನ ರಾಮ ಅಭಿಯಾನವನ್ನು ಆರಂಭಿಸಿದೆ.

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಪಕ್ಷದ ಕಾರ್ಯಕರ್ತರು ಹಾಗೂ ಜನರನ್ನು ಹುರಿದುಂಬಿಸಲು ರಾಜ್ಯ ಬಿಜೆಪಿ ನನ್ನ ರಾಮ ಅಭಿಯಾನವನ್ನು ಆರಂಭಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ರಾಮನ ಹಾಡೊಂದನ್ನು ಹಾಡಿರುವ ವಿಡಿಯೋ ವೊಂದನ್ನು ನನ್ನ ರಾಮ ಹ್ಯಾಷ್ ಟ್ಯಾಗ್ ನೊಂದಿಗೆ ಪೋಸ್ಟ್ ಮಾಡಿದ್ದಾರೆ. ಅಲ್ಲದೆ, ತಮ್ಮ ಪೋಸ್ಟ್ ನ್ನು ಬಿಜೆಪಿಯ ಇತರೆ ನಾಯಕರಿಗೂ ಟ್ಯಾಗ್ ಮಾಡಿದ್ದಾರೆ.

ಇದೇ ರೀತಿಯ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜಗ್ಗೇಶ್ ಅವರೂ ಕೂಡ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸಚಿವ ಭಗವಂತ ಖೂಬಾ ಅವರು ಶ್ರೀರಾಮನ ಕುರಿತು ಮಾತನಾಡಿರುವ ವಿಡಿಯೋ, ನಟ ಗಣೇಶ್ ಶ್ಲೋಕವನ್ನು ಪಠಿಸಿರುವ ವಿಡಿಯೋ, 'ಜೈ ಹೋ' ಖ್ಯಾತಿಯ ಗಾಯಕ ವಿಜಪ್ರಕಾಶ್ ಅವರು ರಾಮ ರಕ್ಷಾ ಸ್ತೋತ್ರದ ಮಂತ್ರವನ್ನು ಪಠಿಸಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೇವಲ ರಾಜಕೀಯ, ಚಿತ್ರರಂಗದ ನಾಯಕರಷ್ಟೇ ಅಲ್ಲದೆ ಸಾಮಾನ್ಯ ಜನರೂ ಕೂಡ ರಾಮನ ಹಾಡು, ಶ್ಲೋಕಗಳನ್ನು ಪಠಿಸಿರುವ ವಿಡಿಯೋಗಳನ್ನು ನನ್ನ ರಾಮ ಹ್ಯಾಷ್ ಟ್ಯಾಗ್ ಬಳಸಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT