ಸಂಗ್ರಹ ಚಿತ್ರ 
ರಾಜ್ಯ

ಹಾವೇರಿ: ವಿವಾದಿತ ಜಾಗದಲ್ಲಿ ರಾಮನ ಫೋಟೋಗೆ ಪೂಜೆ; ಐವರನ್ನು ವಶಕ್ಕೆ ಪಡೆದ ಪೊಲೀಸರು

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ. 

ಹಾವೇರಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ. 

ಹಾವೇರಿಯ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ವಿವಾದಿತ ಜಾಗದಲ್ಲಿ ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು ಈ ಸಂಬಂಧ ತಾಲೂಕು ಸಂಚಾಲಕ ಗಂಗಾಧರ್ ಶೆಟ್ಟರ್, ಸೋಮಶೇಖರ್ ಗೌರಿಮಠ, ಈರಣ್ಣ ಬಳೇಗಾರ, ಮೋಹನ್ ಮೀರಜಕರ್​ ಸೇರಿ ಐವರನ್ನು ಬಂಕಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸ್ಥಳಕ್ಕೆ ಹಾವೇರಿ ಎಸ್.ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಳಿಕ ಶ್ರೀರಾಮನ ಭಾವಚಿತ್ರವನ್ನು ತೆಗೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಾವೇರಿ ಎಸ್​ಪಿ ಹೇಳಿದರು. ಸದ್ಯ ಬಂಕಾಪುರ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಹಿಂದೂಗಳು ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ಜಾಗದಲ್ಲಿ ಸುಮಾರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತಿತ್ತು. ಆದರೆ ಈ ಜಾಗ ನಮ್ಮದು ಎಂದು ಮುಸ್ಲಿಂ ಸಮುದಾಯದವರು ತಕರಾರು ತೆಗೆದಿದ್ದರು. ಹಾಗಾಗಿ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ಜಾಗ ವಿವಾದಿತ ಜಾಗವಾಗಿದೆ. ಸದ್ಯ ಈ ಕುರಿತಾಗಿ ಕೋರ್ಟ್​ನಲ್ಲಿ ಪ್ರಕರಣ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT