ಸಂಗ್ರಹ ಚಿತ್ರ 
ರಾಜ್ಯ

ಹಾವೇರಿ: ವಿವಾದಿತ ಜಾಗದಲ್ಲಿ ರಾಮನ ಫೋಟೋಗೆ ಪೂಜೆ; ಐವರನ್ನು ವಶಕ್ಕೆ ಪಡೆದ ಪೊಲೀಸರು

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ. 

ಹಾವೇರಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆದಿದ್ದು ಅದೇ ಸಮಯದಲ್ಲಿ ಹಾವೇರಿಯ ವಿವಾದಿತ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಿದ್ದು ಈ ಸಂಬಂಧ ಐವರನ್ನು ಬಂಧಿಸಲಾಗಿದೆ. 

ಹಾವೇರಿಯ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ವಿವಾದಿತ ಜಾಗದಲ್ಲಿ ಶ್ರೀರಾಮನ ಫೋಟೋ ಇಟ್ಟು ಪೂಜೆ ಮಾಡಲಾಗಿದ್ದು ಈ ಸಂಬಂಧ ತಾಲೂಕು ಸಂಚಾಲಕ ಗಂಗಾಧರ್ ಶೆಟ್ಟರ್, ಸೋಮಶೇಖರ್ ಗೌರಿಮಠ, ಈರಣ್ಣ ಬಳೇಗಾರ, ಮೋಹನ್ ಮೀರಜಕರ್​ ಸೇರಿ ಐವರನ್ನು ಬಂಕಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸ್ಥಳಕ್ಕೆ ಹಾವೇರಿ ಎಸ್.ಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಳಿಕ ಶ್ರೀರಾಮನ ಭಾವಚಿತ್ರವನ್ನು ತೆಗೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಾವೇರಿ ಎಸ್​ಪಿ ಹೇಳಿದರು. ಸದ್ಯ ಬಂಕಾಪುರ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಹಿಂದೂಗಳು ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ಜಾಗದಲ್ಲಿ ಸುಮಾರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತಿತ್ತು. ಆದರೆ ಈ ಜಾಗ ನಮ್ಮದು ಎಂದು ಮುಸ್ಲಿಂ ಸಮುದಾಯದವರು ತಕರಾರು ತೆಗೆದಿದ್ದರು. ಹಾಗಾಗಿ ಬಂಕಾಪುರ ಬಸ್ ನಿಲ್ದಾಣದ ಸಮೀಪ ಇರುವ ಜಾಗ ವಿವಾದಿತ ಜಾಗವಾಗಿದೆ. ಸದ್ಯ ಈ ಕುರಿತಾಗಿ ಕೋರ್ಟ್​ನಲ್ಲಿ ಪ್ರಕರಣ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2 ದಿನ ದೆಹಲಿಯಲ್ಲೇ ಠಿಕಾಣಿ: ಸಚಿವರ ಖಾತೆ ಖ್ಯಾತೆ, ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ಜೊತೆ CM ಶಿವಕುಮಾರ್ ಚರ್ಚೆ!

ವಿರೋಧ ಪಕ್ಷದ ಗದ್ದಲದ ನಡುವೆ ಸಂಸತ್ತಿನಲ್ಲಿ ಮೋದಿ ಸರ್ಕಾರದಿಂದ ಡೀಲಿಮಿಟೇಷನ್ ಮಸೂದೆಗೆ ಮರು ಜೀವ?

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!

'ಟ್ರಬಲ್ ಶೂಟರ್‌' ಡಿಕೆಶಿ​ಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ

'ಅಟ್ರಾಕ್ಟಿವ್ ಹುಡುಗಿಯರ ಕಡೆಗೆ ಆಕರ್ಷಿತನಾಗಿದ್ದೇನೆ, ಆದ್ರೂ...' : ಸುದೀರ್ಘ ದಾಂಪತ್ಯದ ರಹಸ್ಯ ಬಿಚ್ಚಿಟ್ಟ ಆರ್. ಮಾಧವನ್

SCROLL FOR NEXT