ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಾಜಿ ಸಚಿವ ಎಲ್ ಜಿ ಹಾವನೂರು ಪುತ್ರ ಹಾಗೂ ಕಾನೂನು ಕಾಲೇಜು ಮಾಲೀಕ ಅಶೋಕ್ ಹಾವನೂರು ಆತ್ಮಹತ್ಯೆ!

ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

ಬೆಂಗಳೂರು: ಮಾಜಿ ಕಾನೂನು ಸಚಿವ ದಿವಂಗತ ಎಲ್.ಜಿ ಹಾವನೂರು ಅವರ ಪುತ್ರ ಅಶೋಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ತಮ್ಮ ಮನೆಯಲ್ಲೇ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ತುಮಕೂರು-ಬೆಂಗಳೂರು ಮುಖ್ಯರಸ್ತೆಯ ಹಾವನೂರು ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನದವರೆಗೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ, ಅವರ ಪತ್ನಿ ಮತ್ತು ಮಕ್ಕಳು ಹೋಗಿ ಪರಿಶೀಲಿಸಿದಾಗ ಒಳಗಿನಿಂದ ಬಾಗಿಲು ಹಾಕಿರುವುದು ಕಂಡು ಬಂದಿದೆ. ನಂತರ ಬಾಗಿಲು ಒಡೆದು ನೋಡಿದಾಗ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಪೊಲೀಸರಿಗೆ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ, ಡಿಜಿಟಲ್ ರೂಪದಲ್ಲಿ ಯಾವುದೇ ನೋಟು ಇದೆಯೇ ಎಂದು ಪರಿಶೀಲಿಸುತ್ತಿದ್ದಾರೆ.

ಈ ಸಂಬಂಧ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳಿಂದ ಒಬ್ಬಂಟಿಯಾಗಿರುತ್ತಿದ್ದ ಅವರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಕಳೆದ ಹದಿನೈದು ದಿನಗಳಿಂದ ಮನೆಯಲ್ಲಿದ್ದರು ಮತ್ತು ಹೊರಗೆ ಎಲ್ಲಿಯೂ ಹೋಗುತ್ತಿರಲಿಲ್ಲ. ಅವರು ಖಿನ್ನತೆಯಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT