ಸಚಿವ ಆರ್.ಬಿ.ತಿಮ್ಮಾಪುರ 
ರಾಜ್ಯ

ವರ್ಗಾವಣೆ ದಂಧೆ ಆರೋಪ: ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ (RB Thimmapur) ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ.

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ವರ್ಗಾವಣೆ ದಂಧೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ (RB Thimmapur) ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ (Dinesh Kallahalli) ಎಂಬವವರು ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ (RB Thimmapur) ವಿರುದ್ಧ  ಜಾರಿ ನಿರ್ದೇಶನಾಲಯಕ್ಕೆ (Enforcement Directorate) ದೂರು ಸಲ್ಲಿಸಿದ್ದಾರೆ. ಅಬಕಾರಿ ಇಲಾಖೆ ಡಿಸಿ, ಡಿವೈಎಸ್​ಪಿಗಳಿಂದ ಹಣ ಪಡೆದು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿರುವಂತೆ ಸಚಿವ ತಿಮ್ಮಾಪುರ ಅವರು ಲೋಕಸಭಾ ಚುನಾವಣೆಗೆ ಹಣ ಹೊಂದಿಸಲು ಇಲಾಖಾಧಿಕಾರಿಗಳ ವರ್ಗಾವಣೆಗೆ ಲಂಚ ಸ್ವೀಕರಿಸಿದ್ದಾರೆ. ವರ್ಗಾವಣೆ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದಾರೆ. ಇಲ್ಲಿವರೆಗೆ 18 ಕೋಟಿ ಲಂಚ ಸ್ವೀಕರಿಸಿದ್ದಾರೆ. ಲಂಚದ ಹಣದಲ್ಲಿ ಸಚಿವರಿಗೆ ಸಿಂಹಪಾಲು ನೀಡಲಾಗಿದೆ. 18 ಕೋಟಿ ಹಣದಲ್ಲಿ 13 ಕೋಟಿ ಸಚಿವರ ಖಾತೆಗೆ ಬಿದ್ದಿದೆ. ಉಳಿದ ಹಣ ಸಹಾಯಕ ಕಾರ್ಯದರ್ಶಿ ಸೇರಿದಂತೆ ಕೋಲಾರ ಅಬಕಾರಿ ಡಿಸಿ ಬಸವರಾಜ ಸಂದಿಗ್ವಾಡ್, ರಂಗಪ್ಪ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ವಿವೇಕ್ ಖಾತೆಗೆ ತಲುಪಿದೆ. ಲಂಚದ ಹಣದಲ್ಲಿ ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ. ಅಬಕಾರಿ ಸಚಿವರ ಲಂಚಾವತಾರಕ್ಕೆ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಇಡಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಅಲ್ಲದೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ಮತ್ತು 13 (1) (2) ರ ಅಡಿಯಲ್ಲಿ ಮತ್ತು ವಿಸ್ಲ್ ಬ್ಲೋವರ್ಸ್ ಆಕ್ಟ್ 2014 ರ ಸೆಕ್ಷನ್ 4 (1) ರ ಅಡಿಯಲ್ಲಿ ಮತ್ತು ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ ತಡೆಗಟ್ಟುವಿಕೆ) ಅಡಿಯಲ್ಲಿ ಕಚೇರಿಯ ದುರುಪಯೋಗ ಪಡಿಸಿಕೊಂಡ ಆರೋಪದ ಮೇರೆಗೆ ಕ್ರಮ ಜರುಗಿಸುವಂತೆ  ಒತ್ತಾಯಿಸಿದ್ದಾರೆ.

ಅಧಿಕಾರಿಗಳಿಂದಲೇ ಲಂಚ ವಸೂಲಿ
ಮೂವರು ಡಿಸಿ, ಒಂಬತ್ತು ಅಧೀಕ್ಷಕರು, 13 ಡಿವೈಎಸ್‌ಪಿ, 20 ಇನ್ಸ್‌ಪೆಕ್ಟರ್‌ಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಅವರಿಂದ 16 ಕೋಟಿ ರೂಪಾಯಿ ಲಂಚ ವಸೂಲಿ ಮಾಡಲಾಗಿದೆ. 2.5 ರಿಂದ 3.5 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮತ್ತು ಇನ್ನೊಂದು ತಿಂಗಳಲ್ಲಿ ವರ್ಗಾವಣೆ ಅವಧಿ ಮುಗಿಯುವ ಇನ್ಸ್‌ಪೆಕ್ಟರ್‌ಗಳನ್ನು ಬದಲಾಯಿಸಲು ಬೆಂಗಳೂರು ಸುತ್ತಮುತ್ತಲಿನ ಇನ್ಸ್‌ಪೆಕ್ಟರ್‌ಗಳಿಂದ 40 ರಿಂದ 50 ಲಕ್ಷ ರೂ.ಗಳನ್ನು ಸಂಗ್ರಹಿಸಲಾಗಿದೆ. ಡಿವೈಎಸ್ಪಿಗಳಿಂದ 30ರಿಂದ 40 ಲಕ್ಷ ರೂ. ಅಧೀಕ್ಷಕರಿಂದ 25ರಿಂದ 30 ಲಕ್ಷ ರೂ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಸಿಗಳಿಂದ 2.5 ಕೋಟಿಯಿಂದ 3.5 ಕೋಟಿ ರೂ. ಹೀಗೆ ಒಟ್ಟು 18 ಕೋಟಿ ನಗದು ಸಿಕ್ಕಿದೆ. ಈ ಪೈಕಿ 13 ಕೋಟಿ ಹಣ ಸಚಿವ ಆರ್.ಬಿ.ತಿಮ್ಮಾಪುರ ಅವರಿಗೆ ತಲುಪಿದೆ. ಅಧಿಕೃತ ವಲಯ ಮತ್ತು ಸಾರ್ವಜನಿಕ ಕಾರಿಡಾರ್‌ನಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಅಲ್ಲದೆ ಸಚಿವರ ಪಿಎ, ಪಿಎಸ್ ಹಾಗೂ ಸಿಬ್ಬಂದಿಗೆ 50 ಲಕ್ಷದಿಂದ 1 ಕೋಟಿ ರೂ ವರ್ಗಾವಣೆಯಾಗಿದೆ ಎಂದು ದಿನೇಶ್ ದೂರಿನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT