ಕರ್ನಾಟಕ ಹೈಕೋರ್ಟ್ 
ರಾಜ್ಯ

ಅಕ್ರಮ ಎಂಬ ಮಾತ್ರಕ್ಕೆ ಕಟ್ಟಡಗಳನ್ನು ನೀವು ಕೆಡವಲಾಗದು: ಬಿಬಿಎಂಪಿಗೆ ಹೈಕೋರ್ಟ್ ಚಾಟಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆಯದಿದ್ದರೇ ಕೂಡಲೇ ಕಟ್ಟಡವನ್ನು ಕೆಡವಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವ್ಯಾಖ್ಯಾನಿಸಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆಯದಿದ್ದರೇ ಕೂಡಲೇ ಕಟ್ಟಡವನ್ನು ಕೆಡವಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವ್ಯಾಖ್ಯಾನಿಸಿದೆ.

BBMP ಕಾಯಿದೆ, 2020 ರ ಸೆಕ್ಷನ್ 248(3) ಮತ್ತು 356 ರ ಅಡಿಯಲ್ಲಿ ಆದೇಶಗಳನ್ನು ರವಾನಿಸುವ ಮೊದಲು, ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣವಾಗಿದೆಯೇ ಅಥವಾ ಕಟ್ಟಡದ ಬೈಲಾಗಳ ಉಲ್ಲಂಘನೆಯಾಗಿದೆಯೇ ಎಂಬುದನ್ನು ಬಿಬಿಎಂಪಿ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ

ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಕಟ್ಟಡಗಳನ್ನು ನೆಲಸಮ ಮಾಡುವ ಬದಲು ಬಿಬಿಎಂಪಿ ಬೈಲಾ ಉಲ್ಲಂಘನೆಯಾಗಿದ್ದರೆ ಅದಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ದೇಶನ ನೀಡಬಹುದು. ಉಲ್ಲಂಘನೆ ಮಾಡಿರುವುದನ್ನು ಪರಿಗಣಿಸಿ ಅಂತಹ ಕಟ್ಟಡಗಳ ಸಕ್ರಮ ಮಾಡುವುದಕ್ಕೆ ಬೈಲಾದಲ್ಲಿ ಅವಕಾಶವಿದೆ. ಉಲ್ಲಂಘನೆ ಮಾಡಿದ ದಿನದಿಂದ ತೆರಿಗೆ ಮತ್ತು ದಂಡ ಪಾವತಿಸುವಂತೆ ಸೂಚನೆ ನೀಡಬಹುದು ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ನಕ್ಷೆ ಮಂಜೂರಾತಿ ಪಡೆಯದೆ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಬಿಬಿಎಂಪಿ ನೀಡಿದ್ದ ನೋಟಿಸ್‌ ಪ್ರಶ್ನಿಸಿ ಬೆಂಗಳೂರಿನ ರೆಮ್ಕೋ(ಬಿಎಚ್‌ಇಎಲ್) ಬಡಾವಣೆಯ ನಿವಾಸಿಗಳು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಮಹತ್ವದ ಆದೇಶ ಹೊರಹಾಕಿತು.

ಉಲ್ಲಂಘನೆಯ ಸ್ವರೂಪವನ್ನು ಖಚಿತಪಡಿಸಿಕೊಳ್ಳಲು - ಅದನ್ನು ಪ್ಲಾನ್ ಇಲ್ಲದೆ ನಿರ್ಮಿಸಲಾಗಿದೆಯೇ ಅಥವಾ ಪ್ಲಾನ್  ಮಂಜೂರಾದ ಸಂದರ್ಭದಲ್ಲಿ ಕಟ್ಟಡದ ಒಂದು ಭಾಗವು ವ್ಯತ್ಯಾಸಗೊಳ್ಳುತ್ತದೆಯೇ ಎಂಬುದನ್ನು ಪರಿಗಣಿಸಿ ಕಟ್ಟಡದ ಮಾಲೀಕರಿಗೆ ನೋಟಿಸ್ ನೀಡಬೇಕೆಂದು ನ್ಯಾಯಾಲಯ ಹೇಳಿದೆ.

BBMP ಕಾಯಿದೆಯ ಸೆಕ್ಷನ್ 248 ಮತ್ತು 356 (BBMP ಕಾಯ್ದೆ ಜಾರಿಗೆ ಬರುವ ಮೊದಲು KMC ಕಾಯಿದೆಯ ವಿಭಾಗ 321(3) ಮತ್ತು 462), ಇದು ನಿರ್ಮಾಣ ಹಂತದಲ್ಲಿದೆಯೇ ಅಥವಾ ಯೋಜನೆ ಇಲ್ಲದೆ ನಿರ್ಮಿಸಲಾಗಿದೆಯೇ ಅಥವಾ ಉಲ್ಲಂಘನೆಗಳ ಸ್ವರೂಪವು ಹಿನ್ನಡೆಗೆ ಸಂಬಂಧಿಸಿದೆ ಎಂಬುದನ್ನು ವಿವರಿಸುತ್ತದೆ.

ಮಂಜೂರಾದ ಯೋಜನೆಯನ್ನು ಉಲ್ಲಂಘಿಸಿದಾಗ ಅಥವಾ ಕಟ್ಟಡದ ಬೈಲಾಗಳಿಗೆ ವಿರುದ್ಧವಾಗಿ ನಿರ್ಮಾಣವು ಕಾನೂನುಬಾಹಿರ ಅಥವಾ ಅನಧಿಕೃತವಾಗಿದೆ ಎಂದು ಹೇಳಬಹುದು. ಯಾವುದೇ ಮಂಜೂರಾತಿ ಯೋಜನೆ ಪಡೆಯದ ಕಾರಣ ನಿರ್ಮಾಣ ಅಕ್ರಮ ಎಂದು ಹೇಳಬಹುದು ಎಂದು ನ್ಯಾಯಾಲಯ ತಿಳಿಸಿದೆ.

ಬಿಬಿಎಂಪಿ ಅಧಿಕಾರಿಗಳು ನೀಡಿದ್ದ ಕೆಡವಲು ನೋಟಿಸ್ ಪ್ರಶ್ನಿಸಿ ಎಂ.ಚಂದ್ರಕುಮಾರ್ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್  ಅವರ ಪೀಠ ವಿಚಾರಣೆ ನಡೆಸಿತು.

ಅರ್ಜಿ ಸಲ್ಲಿಸಿ ಯೋಜನೆ ಮಂಜೂರಾತಿ ಪಡೆಯದೇ ನಿರ್ಮಾಣ ಮಾಡಲಾಗಿದೆ ಎಂಬುದು ಅರ್ಜಿದಾರರ ವಿರುದ್ಧ ಬಿಬಿಎಂಪಿ ಆರೋಪವಾಗಿತ್ತು. ಆದ್ದರಿಂದ, ಇದು ಕಾನೂನುಬಾಹಿರ ಮತ್ತು  ಕಟ್ಟಡ ಕೆಡುಗುವ  ಅಗತ್ಯವಿದೆ ಎಂದು ಬಿಬಿಎಂಪಿ ವಾದಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT