ಹೀರೇಮಗಳೂರು ಕಣ್ಣನ್ 
ರಾಜ್ಯ

ಹೀರೇಮಗಳೂರು ಕಣ್ಣನ್ ಗೆ ನೀಡಿದ್ದ ಹೆಚ್ಚುವರಿ ಹಣವನ್ನು ತಹಶೀಲ್ದಾರ್ ರಿಂದಲೇ ವಸೂಲಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಕನ್ನಡದ ಪೂಜಾರಿ ಎಂದೇ ಜನಪ್ರಿಯರಾಗಿರುವ ಹಿರಿಯ ಸಾಹಿತಿ, ವಾಗ್ಮಿ ಹಿರೇಮಗಳೂರು ಕಣ್ಣನ್‌ಗೆ ನೀಡಿದ್ದ ಅರ್ಚಕ ಹಣವನ್ನು ವಾಪಸ್ ನೀಡುವ ಕುರಿತಂತೆ ನೋಟಿಸ್‌ ನೀಡಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರದಲ್ಲಿ ಕಣ್ಣನ್‌ ಅವರ ತಪ್ಪೇನೂ ಇಲ್ಲ ಎಂದಿರುವ ಸಿಎಂ, ಹೆಚ್ಚುವರಿ ಹಣವನ್ನು ತಹಸೀಲ್ದಾರ್‌ ಅವರಿಂದ

ಬೆಂಗಳೂರು: ಕನ್ನಡದ ಪೂಜಾರಿ ಎಂದೇ ಜನಪ್ರಿಯರಾಗಿರುವ ಹಿರಿಯ ಸಾಹಿತಿ, ವಾಗ್ಮಿ ಹಿರೇಮಗಳೂರು ಕಣ್ಣನ್‌ಗೆ ನೀಡಿದ್ದ ಅರ್ಚಕ ಹಣವನ್ನು ವಾಪಸ್ ನೀಡುವ ಕುರಿತಂತೆ ನೋಟಿಸ್‌ ನೀಡಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರದಲ್ಲಿ ಕಣ್ಣನ್‌ ಅವರ ತಪ್ಪೇನೂ ಇಲ್ಲ ಎಂದಿರುವ ಸಿಎಂ, ಹೆಚ್ಚುವರಿ ಹಣವನ್ನು ತಹಸೀಲ್ದಾರ್‌ ಅವರಿಂದಲೇ ವಸೂಲಿ ಮಾಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಸ್‌ ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಸೀಲ್ದಾರ್ ತಪ್ಪಿದೆಯೇ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ನ್ನು ಹಿಂಪಡೆಯಲು ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಸೀಲ್ದಾರರು, ಹೀಗಾಗಿ ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಎಂದು ತಿಳಿಸಿದ್ದಾರೆ. 

ಏನಿದು ಪ್ರಕರಣ?: ಹಿರೇಮಗಳೂರು ಕಣ್ಣನ್‌ ಅವರು ಹಿರೇಮಗಳೂರು ಗ್ರಾಮದಲ್ಲಿರುವ ಕೊಂದಡರಾಮಚಂದ್ರಸ್ವಾಮಿ ದೇವಾಲಯದ ಅರ್ಚಕರಾಗಿದ್ದಾರೆ. ಕಣ್ಣನ್‌ಗೆ ವೇತನ ತಡೆಹಿಡಿದು ಚಿಕ್ಕಮಗಳೂರು ಜಿಲ್ಲಾಡಳಿತವು ಕಳೆದ ತಿಂಗಳು ನೋಟಿಸ್ ನೀಡಿತ್ತು. ದೇವಾಲಯದ ಆದಾಯ ಕಡಿಮೆ ಇದ್ದು, ಸಂಬಳ ಹೆಚ್ಚುವರಿಯಾಗಿ ಪಾವತಿ ಆಗಿದೆ. ಹೀಗಾಗಿ 4,500 ರೂಪಾಯಿಯಂತೆ 10 ವರ್ಷದ 4,74,000 ರೂಪಾಯಿ ಹಣವನ್ನು ವಾಪಸ್ ನೀಡಲು ಸೂಚನೆ ನೀಡಲಾಗಿತ್ತು.

ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂಪಾಯಿ ಸಂಬಳ ಜಮೆಯಾಗುತ್ತಿತ್ತು. 7,500 ರೂಪಾಯಿ ನೀಡಿದ ಸಂಬಳದಲ್ಲಿ 4,500 ರೂಪಾಯಿಯಂತೆ 10 ವರ್ಷದ ಹಣವನ್ನು ವಾಪಸ್ ನೀಡಲು ಸೂಚನೆ ನೀಡಲಾಗಿತ್ತು. ಸದ್ಯ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ತಡೆ ಹಿಡಿಯಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ಚಿಕ್ಕಮಗಳೂರು ತಹಸೀಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT