ಸಂಗ್ರಹ ಚಿತ್ರ 
ರಾಜ್ಯ

ಅಪಘಾತ ವಿಚಾರಕ್ಕೆ ವಾಗ್ವಾದ: ಬಾನೆಟ್‌ ಮೇಲಿದ್ದ ವ್ಯಕ್ತಿಯನ್ನು 400 ಮೀ. ದೂರಕ್ಕೆ ಎಳೆದೊಯ್ದು ಚಾಲಕ, ವಿಡಿಯೋ ವೈರಲ್!

ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ನಗರದಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಬೆಳಕಿಗೆ ಬಂದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆ ಇದಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯಾವಳಿಗಳು ಸೆರೆಯಾಗಿವೆ.

ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಕೊಂಡೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೆ, ಇತರ ವಾಹನಗಳು ಮತ್ತು ಮತ್ತಿಬ್ಬರು ವ್ಯಕ್ತಿಗಳು ಕ್ಯಾಬ್ ಅನ್ನು ಬೆನ್ನಟ್ಟುತ್ತಿರುವುದೂ ಕೂಡ ಕಂಡು ಬಂದಿದೆ.

ಘಟನೆ ಸಂಬಂಧ ಕಾರು ಚಾಲಕ ಮಹಮ್ಮದ್‌ ಮುನೀರ್ ವಿರುದ್ಧ ಎನ್‌.ಸಿ.ಆರ್‌ ದಾಖಲು ಮಾಡಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

‘ಮಲ್ಲೇಶ್ವರದ ಸರ್ಕಲ್‌ ಮಾರಮ್ಮ ದೇವಸ್ಥಾನದ ಬಳಿ, ಅಶ್ವತ್ಥ್‌ ಅವರ ಕ್ಯಾಬ್​ಗೆ ಮಹಮ್ಮದ್ ಮುನೀರ್ ಕಾರು ಡಿಕ್ಕಿ ಹೊಡೆದಿತ್ತು. ಈ ವೇಳೆ ಕಾರು ನಿಲ್ಲಿಸುವಂತೆ ಅಶ್ವತ್ಥ್‌ ತಿಳಿಸಿದ್ದಾರೆ. ಆದರೆ, ಮುನೀರ್‌ ವಾಹನ ನಿಲ್ಲಿಸದೆ ಮುಂದಕ್ಕೆ ತೆರಳಲು ಪ್ರಯತ್ನಿಸಿದ್ದರು. ಆಗ, ಅಶ್ವತ್ಥ್‌ ಅವರು ಕಾರಿನ ಬಾನೆಟ್‌ ಮೇಲೆ ಹತ್ತಿ ಕೆಳಕ್ಕೆ ಇಳಿಯುವಂತೆ ಮನವಿ ಮಾಡಿದ್ದರು. ಅದನ್ನು ಲೆಕ್ಕಿಸದೇ ಅಶ್ವತ್ಥ್‌ ಅವರನ್ನು ದೂರಕ್ಕೆ ಎಳೆದೊಯ್ದು ದುಷ್ಕೃತ್ಯ ಎಸಗಿದ್ದಾನೆ.

‘ಮಲ್ಲೇಶ್ವರದ 18ನೇ ಕ್ರಾಸ್‌ನ ಸಿಗ್ನಲ್​ವರೆಗೂ ಆರೋಪಿ ತನ್ನ ಕಾರು ಚಲಾಯಿಸಿದ್ದು, ಸ್ಥಳೀಯರು ಹಿಂದೆ ಓಡಿದರೂ ಕಾರು ನಿಲ್ಲಿಸಿಲ್ಲ. ನಂತರ ಕಾರನ್ನು ನಿಯಂತ್ರಿಸಲು ಸಾಧ್ಯವಾಗದೆ ಕಂಬವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಅಶ್ವತ್ಥ್ ಅವರು ಕೆಳಗೆ ಬಿದ್ದಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯ ಕುರಿತು ಪ್ರತಿಕ್ರಿಯೆ ನೀಡಿರುವ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂಎನ್ ಅನುಚೇತ್ ಅವರು, ಮಲ್ಲೇಶ್ವರಂ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಮಾರಮ್ಮ ದೇವಸ್ಥಾನದ ಬಳಿ ಘಟನೆ ನಡೆದಿದೆ. ದೃಶ್ಯದಲ್ಲಿರುವ ವ್ಯಕ್ತಿಯನ್ನು ಗುರುತಿಸಲಾಗಿದ್ದು, ತನಿಖೆಯ ನಂತರ ಚಾಲಕನ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT