ಪ್ರಜ್ವಲ್ ರೇವಣ್ಣ 
ರಾಜ್ಯ

ಅಪೂರ್ಣ ಮೇಲ್ಸೇತುವೆ ಶೀಘ್ರವೇ ಪೂರ್ಣಾ: ಪ್ರಜ್ವಲ್ ರೇವಣ್ಣ

ನಗರದಲ್ಲಿ ನರಸಿಂಹ ರಾಜ ವೃತ್ತ ಹಾಗೂ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ಅಗತ್ಯವಿರುವ ಮೇಲ್ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ಹಾಸನ: ನಗರದಲ್ಲಿ ನರಸಿಂಹ ರಾಜ ವೃತ್ತ ಹಾಗೂ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ಅಗತ್ಯವಿರುವ ಮೇಲ್ಸೇತುವೆ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ವರದಿಗಾರರೊಂದಿಗೆ ಮಾತನಾಡಿರುವ ಪ್ರಜ್ವಲ್ ರೇವಣ್ಣ,  ಮೇಲ್ಸೇತುವೆ ಕಾಮಗಾರಿ ಅರ್ಧ ಮುಕ್ತಾಯವಾಗಿದೆ. ಅನುದಾನದ ಕಾರಣದಿಂದ, ರೈಲ್ವೆ ಟ್ರ್ಯಾಕ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ನಡುವಿನ ಪ್ರದೇಶದಲ್ಲಿ ಗುತ್ತಿಗೆದಾರ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ. ಸರಣಿ ಮನವಿಗಳ ಬಳಿಕವೂ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ತಾವು ಈ ಯೋಜನೆ ಬಗ್ಗೆ ಕೇಂದ್ರ ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದು ಸಚಿವರು ಸಮರೋಪಾದಿಯಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸುವುದಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ರಾಜ್ಯ ಸರ್ಕಾರ ತನ್ನ ಅನುದಾನ ಬಿಡುಗಡೆ ಮಾಡಲು ವಿಫಲವಾದರೆ ಯೋಜನೆಗೆ ಅನುದಾನ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ. ಹುಬ್ಬಳ್ಳಿಯಲ್ಲಿ ಆಗ್ನೇಯ ರೈಲ್ವೆ ಪ್ರಧಾನ ವ್ಯವಸ್ಥಾಪಕರನ್ನು ಭೇಟಿ ಮಾಡಿದ್ದೇನೆ, ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ಮೇಲ್ದರ್ಜೆಗೇರಿಸುವುದು, ಮೊಸಳೆಹೊಸಹಳ್ಳಿ ರೈಲು ನಿಲ್ದಾಣ ಮೇಲ್ದರ್ಜೆಗೇರಿಸುವುದು, ಅರಸೀಕೆರೆಯಲ್ಲಿ ಒಂದೆ ಭಾರತ್ ರೈಲು ನಿಲುಗಡೆ ಸೇರಿದಂತೆ ಪ್ರಸ್ತಾವನೆಗಳ ಕುರಿತು ಚರ್ಚಿಸಿರುವುದಾಗಿ ಸಂಸದರು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ತಾವೇ ಕಣಕ್ಕಿಳಿಯುವುದಾಗಿ ತಿಳಿಸಿರುವ ಪ್ರಜ್ವಲ್ ರೇವಣ್ಣಾ, ಅಭ್ಯರ್ಥಿ ವಿಚಾರದಲ್ಲಿ ಬಗ್ಗೆ ಯಾವುದೇ ಗೊಂದಲ ಬೇಡ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಈಗಾಗಲೇ ತಮ್ಮನ್ನು ಅಭ್ಯರ್ಥಿ ಎಂದು  ಘೋಷಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜೆಡಿಎಸ್ ಮತ್ತು ಬಿಜೆಪಿಯ ಹಿರಿಯ ನಾಯಕರು ಶೀಘ್ರದಲ್ಲೇ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT