ನಾಪತ್ತೆಯಾಗಿದ್ದ ಬಾಲಕ ಪರಿಣವ್ ಹೈದರಾಬಾದ್ ನಲ್ಲಿ ಪತ್ತೆಯಾಗಿರುವುದು 
ರಾಜ್ಯ

ಟ್ಯೂಷನ್ ಹೋಗಿ ನಾಪತ್ತೆಯಾಗಿದ್ದ ಬಾಲಕ ಪರಿಣವ್: ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪತ್ತೆ

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ 12 ವರ್ಷದ ಬಾಲಕ ಪರಿಣವ್ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ. ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದು  ಬಾಲಕ ಸುರಕ್ಷಿತವಾಗಿದ್ದಾನೆ ಎಂದು ತಿಳಿಸಿದ್ದಾರೆ. 

ಬೆಂಗಳೂರು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ 12 ವರ್ಷದ ಬಾಲಕ ಪರಿಣವ್ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ. ಹೈದರಾಬಾದ್ ನ ನಾಂಪಲ್ಲಿ ಮೆಟ್ರೋ ನಿಲ್ದಾಣದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದು  ಬಾಲಕ ಸುರಕ್ಷಿತವಾಗಿದ್ದಾನೆ ಎಂದು ತಿಳಿಸಿದ್ದಾರೆ. 

ಜನವರಿ 21ರ ಭಾನುವಾರ ವೈಟ್ ಫೀಲ್ಡ್ ನಲ್ಲಿ ಟ್ಯೂಷನ್ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಪರಿಣವ್ ನಾಪತ್ತೆಯಾಗಿದ್ದನು. ಮಾರತ್ತಹಳ್ಳಿ, ಯಮಲೂರು ಮತ್ತು ಮೆಜೆಸ್ಟಿಕ್ ನ ವಿವಿಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಆತನ ಚಲನವಲನಗಳು ಪತ್ತೆಯಾಗಿತ್ತು. ಹುಡುಗನ ಬಳಿ ಸ್ವಲ್ಪ ಹಣ ಮಾತ್ರ ಇತ್ತು, ಆದರೆ ಆತ ಹೈದರಾಬಾದ್ ನ್ನು ಹೇಗೆ ತಲುಪಿದನು ಎಂಬುದು ಇನ್ನೂ ತಿಳಿದಿಲ್ಲ. ಪೋಷಕರು ಹುಡುಗನೊಂದಿಗೆ ಮಾತನಾಡಿದ್ದು, ಅವನನ್ನು ಕರೆದುಕೊಂಡು ಬರಲು ಹೊರಟಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಬಾಲಕ ಪರಿಣವ್ ಅವರ ತಾಯಿ, ನಮ್ಮ ಮಗ ಹೈದರಾಬಾದ್‌ನ ನಾಂಪಲ್ಲಿ ಮೆಟ್ರೋ ನಿಲ್ದಾಣ ಬಳಿ ಪತ್ತೆಯಾಗಿದ್ದಾನೆ. ಆತ ಸುರಕ್ಷಿತವಾಗಿದ್ದಾನೆ. ಮಗನನ್ನು ಕರೆತರಲು ಕುಟುಂಬದವರು ಹೈದರಾಬಾದ್‌ಗೆ ಹೋಗಿದ್ದಾರೆ. ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

ಜನವರಿ 21ರ ಭಾನುವಾರ ಗುಂಜೂರಿನ ತಮ್ಮ ಮನೆಯಿಂದ ಬಾಲಕನನ್ನು ಪೋಷಕರು ಟ್ಯೂಷನ್‌ಗೆ ಬಿಟ್ಟು ಬಂದಿದ್ದರು. ಆದರೆ ಟ್ಯೂಷನ್ ಮುಗಿದ ಬಳಿಕ ಮಗನನ್ನು ಕರೆದುಕೊಂಡು ಬರುವುದು ಸ್ವಲ್ಪ ತಡವಾಗಿದ್ದು, ಸ್ಥಳಕ್ಕೆ ಬಂದು ನೋಡಿದಾಗ ಆತ ನಾಪತ್ತೆಯಾಗಿದ್ದ. ಹಳದಿ ಟೀ ಶರ್ಟ್ ಮತ್ತು ನೇವಿ ಬ್ಲೂ ಪ್ಯಾಂಟ್ ಧರಿಸಿದ್ದ ಬಾಲಕನ ಬಳಿ ಅಲೆನ್ ಎಂದು ಬರೆಯಲಾಗಿರುವ ಶಾಲಾ ಬ್ಯಾಗ್ ಇತ್ತು.

ನಾಪತ್ತೆಯಾಗಿದ್ದ ವಿದ್ಯಾರ್ಥಿಯ ತಂದೆ ಸುಕೇಶ್ ಅವರು ವೈಟ್‌ಫೀಲ್ಡ್ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದರು. ಭಾನುವಾರ ಮಧ್ಯಾಹ್ನ 2.30ಕ್ಕೆ ಕುಂದಲಹಳ್ಳಿ ಗೇಟ್ ಮತ್ತು ಮಾರತ್ತಹಳ್ಳಿ ಸೇತುವೆ ಸಮೀಪದ ಕಾವೇರಿ ಖಾಸಗಿ ಆಸ್ಪತ್ರೆ ಬಳಿ ಪ್ರಣವ್ ಕಾಣಿಸಿಕೊಂಡಿರುವುದು ಸಿಸಿಟಿವಿ ದೃಶ್ಯಗಳಿಂದಿ ಗೊತ್ತಾಗಿದೆ. ಸ್ವಲ್ಪ ಸಮಯದ ನಂತರ ಬಸ್ ಹತ್ತಿದ್ದಾನೆ. ಸಂಜೆ 4.30ಕ್ಕೆ ಮೆಜೆಸ್ಟಿಕ್‌ ಬಸ್ ನಿಲ್ದಾಣದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT