ಸಿಎಂ ಸಿದ್ದರಾಮಯ್ಯ 
ರಾಜ್ಯ

ಕರ್ಪೂರಿ ಠಾಕೂರ್ ಗೆ ಭಾರತ ರತ್ನ ನೀಡಿದ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ 

ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತಯಂತ್ರದ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ನ ನಾಯಕ ದಿಗ್ವಿಜಯ್ ಸಿಂಗ್ ಈ ಬಗ್ಗೆ ಮಾತನಾಡಿದ್ದು, ಇವಿಎಂ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರು: ಬಿಹಾರದ ಮಾಜಿ ಸಿಎಂ ದಿ. ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿರುವ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಸತ ವ್ಯಕ್ತಪಡಿಸಿದ್ದು, ಸ್ವಾಗತಿಸಿದ್ದಾರೆ. ಕರ್ಪೂರಿ ಠಾಕೂರ್ ಅವರನ್ನು ಬಿಹಾರದ ದೇವರಾಜ ಅರಸು ಎನ್ನುತ್ತಿದ್ದರು ಎಂಬುದನ್ನು ಸಿದ್ದರಾಮಯ್ಯ ಸ್ಮರಿಸಿದ್ದಾರೆ.
 
ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕರ್ಪೂರಿ ಠಾಕೂರ್ ಅವರು ಸಾಮಾಜಿಕ ನ್ಯಾಯದ ಪ್ರಬಲ ಬೆಂಬಲಿಗರಾಗಿದ್ದರು ಎಂದು ಹೇಳಿದ್ದಾರೆ.
 
ಸಾಮಾಜಿಕ ನ್ಯಾಯದ ಪ್ರಬಲ ಪ್ರತಿಪಾದಿಯಾಗಿದ್ದವರಿಗೆ ಭಾರತ ರತ್ನದ ಗೌರವ ದೊರೆತಿರುವುದು ಅತ್ಯಂತ ಸಂತಸದ ವಿಷಯವಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ನಲ್ಲಿ ಹೇಳಿದ್ದಾರೆ.

ಎಪ್ಪತ್ತರ ದಶಕದಲ್ಲಿ ಕರ್ನಾಟಕದ ಮಾದರಿಯಲ್ಲಿ ಬಿಹಾರದಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಕರ್ಪೂರಿ ಠಾಕೂರ್ ಅವರನ್ನು "ಬಿಹಾರದ ದೇವರಾಜ್ ಅರಸು" ಎಂದು ಬಣ್ಣಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

‘‘ಹಿಂದುಳಿದ ಸವಿತಾ ಸಮುದಾಯಕ್ಕೆ ಸೇರಿದ ಕರ್ಪೂರಿ ಠಾಕೂರ್ ಅವರು ಜಾತಿ ಪೀಡಿತ ಬಿಹಾರ ರಾಜ್ಯಕ್ಕೆ ಎರಡು ಬಾರಿ ಮುಖ್ಯಮಂತ್ರಿಯಾಗಿರುವುದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಅವರು ಭಾರತ ರತ್ನಕ್ಕೆ ಅತ್ಯಂತ ಅರ್ಹ ವ್ಯಕ್ತಿ, ಅವರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ಸಿದ್ದರಾಮಯ್ಯ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಹನ ಸವಾರರಿಗೆ Good news: Ethanol ಮಿಶ್ರಿತ ಪೆಟ್ರೋಲ್ ಮೇಲಿನ ಎಲ್ಲಾ ಸೆಸ್-ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಇರಾನ್ ಮೇಲೆ ಮತ್ತೆ ಅಮೆರಿಕಾ ದಾಳಿ; ಟೆಹ್ರಾನ್ ಕಠಿಣ ಕ್ರಮ, ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್..!

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಸೀಕ್ರೆಟ್ ಆಪರೇಷನ್: ಇರಾನ್‌ಗೇ ಗೊತ್ತಾಗದಂತೆ 10 ಕೋಟಿ ಬ್ಯಾರೆಲ್ ತೈಲ ಸಾಗಣೆ..!

ಕಾಂಗ್ರೆಸ್ ಬಡವರ ಪಕ್ಷ, ಹೂವಿನ ಹಾರದ ಬದಲು ದೇಣಿಗೆ ನೀಡಿ: ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

140 ಕೋಟಿ ಭಾರತೀಯರ ಆಶೀರ್ವಾದ ನನ್ನ ದೊಡ್ಡ ಶಕ್ತಿ: Narendra Modi

SCROLL FOR NEXT