ಹತ್ಯೆಯಾದ ಶಿಕ್ಷಕಿ ದೀಪಿಕಾ. 
ರಾಜ್ಯ

ಮೇಲುಕೋಟೆ: ಶಿಕ್ಷಕಿ ದೀಪಿಕ ಶವವಾಗಿ ಪತ್ತೆ ಪ್ರಕರಣ; ಯುವಕನ ಮೇಲೆ ಅನುಮಾನ!

ಮೇಲುಕೊಟೆಯ ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣದಿಂದ ಇಡೀ ಮಂಡ್ಯ ಜಿಲ್ಲೆ ಬೆಚ್ಚಿ ಬಿದ್ದಿದೆ. ಣಿಕ್ಯಹಳ್ಳಿಯ 28 ವರ್ಷದ ಅತಿಥಿ ಶಿಕ್ಷಕಿ ದೀಪಿಕಾ ಶವ ಮೇಲುಕೋಟೆಯ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿತ್ತು. ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು...

ಮಂಡ್ಯ: ಮೇಲುಕೊಟೆಯ ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣದಿಂದ ಇಡೀ ಮಂಡ್ಯ ಜಿಲ್ಲೆ ಬೆಚ್ಚಿ ಬಿದ್ದಿದೆ. ಣಿಕ್ಯಹಳ್ಳಿಯ 28 ವರ್ಷದ ಅತಿಥಿ ಶಿಕ್ಷಕಿ ದೀಪಿಕಾ ಶವ ಮೇಲುಕೋಟೆಯ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪತ್ತೆಯಾಗಿತ್ತು. ಮಣ್ಣಿನಲ್ಲಿ ಹೂತಿಟ್ಟ ರೀತಿಯಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು, ಇದೀಗ ಯುವಕನೋರ್ವನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಯುವಕ ದೀಪಿಕಾ ಅವರನ್ನು ಅಕ್ಕಾ ಅಕ್ಕಾ ಎಂದುಕೊಂಡು ದೀಪಿಕಾಗೆ ಹತ್ತಿರವಾಗಿದ್ದ. ಆತನ ಮೇಲೆ ದೀಪಿಕಾ ಪತಿ ಅನುಮಾನ ವ್ಯಕ್ತಪಡಿಸಿದ್ದು, ಇದೀಗ ನಾಪತ್ತೆಯಾಗಿರುವ ಈ ಯುವಕನ ಮೇಲೆ ಪೊಲೀಸರಿಗೂ ಅನುಮಾನ ತೀವ್ರಗೊಂಡಿದೆ.

ದೀಪಿಕಾ ಕುಟುಂಬಸ್ಥರು ಯುವಕನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಆತ ಕೂಡ ನಾಪತ್ತೆಯಾಗಿರುವುದು ಅನುಮಾನ ತೀವ್ರವಾಗುವಂತೆ ಮಾಡಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಎಲ್ಲಾ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಹತ್ಯೆ ದಿನ ದೀಪಿಕಾ ಮತ್ತು ಯುವಕನ ನಡುವೆ ಜಗಳ ನಡೆದಿದೆ. ಈ ಜಗಳದ ದೃಶ್ಯವನ್ನು ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ಪ್ರವಾಸಿಗರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಘಟನೆ ಬಳಿಕ ಪ್ರವಾಸಿಗರು ಪೊಲೀಸರಿಗೆ ವಿಡಿಯೋವನ್ನು ನೀಡಿದ್ದಾರೆ. ಇದೇ ಸ್ಥಳದಲ್ಲಿಯೇ ದೀಪಿಕಾ ಅವರ ಮೃತದೇಹ ಪತ್ತೆಯಾಗಿತ್ತು.

ಇದಲ್ಲದೆ ಯುವಕ ತನ್ನ ತಂದೆಗೆ ಸಂದೇಶವೊಂದನ್ನು ರವಾನಿಸಿದ್ದು, ನನ್ನ ಹುಡುಕಬೇಡಿ, ಅಕ್ಕಗೆ ಒಳ್ಳೆ ಕಡೆ ಮದುವೆ ಮಾಡಿ ಎಂದು ತಿಳಿಸಿರುವ ವಿಚಾರ ಕೂಡ ಇದೀಗ ಬೆಳಕಿಗೆ ಬಂದಿದೆ. ಈ ಎಲ್ಲಾ ಅಂಶಗಳು ಯುವಕ ಮೇಲೆ ಅನುಮಾನ ತೀವ್ರಗೊಳ್ಳುವಂತೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT