ಚಿತ್ರದುರ್ಗದಲ್ಲಿ ಅಪಘಾತ 
ರಾಜ್ಯ

ಚಿತ್ರದುರ್ಗ: ನಿದ್ದೆ ಮಂಪರಿನಲ್ಲಿದ್ದ ಚಾಲಕ, ಸೇತುವೆಗೆ ಡಿಕ್ಕಿ ಹೊಡೆದ ಕಾರು; 3 ಮಕ್ಕಳು ಸೇರಿ ನಾಲ್ವರ ದುರ್ಮರಣ

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.

ಚಿತ್ರದುರ್ಗ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.

ಮೃತರನ್ನು ಲಿಂಗಪ್ಪ (26), ಸಿಂಧುಶ್ರೀ (2), ಐದು ತಿಂಗಳ ಅಯ್ಯಳಪ್ಪ ಹಾಗೂ ಮೂರು ತಿಂಗಳ ರಕ್ಷಾ ಎಂದು ಗುರುತಿಸಲಾಗಿದೆ. ಯಲ್ಲಮ್ಮ (30), ಮಲ್ಲಮ್ಮ (20) ಹಾಗೂ ನಾಗಪ್ಪ (35) ಗಂಭೀರವಾಗಿ ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ದಂಡಮ್ಮನಹಳ್ಳಿ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೇ ಕುಟುಂಬದ ಇವರು ದೇವದುರ್ಗದಿಂದ ಬುಧವಾರ ರಾತ್ರಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಚಳ್ಳಕೆರೆ ಸಮೀಪ ಚಾಲಕನಿಗೆ ನಿದ್ದೆಯ ಮಂಪರು ಶುರುವಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಅಪ್ಪಳಿಸಿದೆ. ಅತಿ ವೇಗವಾಗಿದ್ದರಿಂದ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಚಳ್ಳಕೆರೆ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT